ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ

By Staff
|
Google Oneindia Kannada News

End factionalism in congress :Sonia Gandhi
ನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು.

ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ ಯುಪಿಎ ರಂಗ ಕೇಂದ್ರದಲ್ಲಿ ಐದು ವರ್ಷ ಕಾಲ ನಿರಾಂತಕವಾಗಿ ಅಡಳಿತ ಅವಧಿ ಮುಗಿಸಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದ ಅವರು, ಈ ಐದು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಅಷ್ಟೂ ಭರವಸೆಯನ್ನು ಈಡೇರಿಸಿದೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಕಾಂಗ್ರೆಸ್ ನಾಯಕರು ಹೊರಬೇಕು ಎಂದು ಸೂಚನೆ ನೀಡಿದ ಸೋನಿಯಾ ಗಾಂಧಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಅವರ ನಾಯಕತ್ವವನ್ನು ಮನಸಾರೆ ಹೊಗಳಿಸಿದರು.

(ದಟ್ಸ್ ಕನ್ನಡ ವಾರ್ತೆ)
8 ಆಸ್ಕರ್ ಪ್ರಶಸ್ತಿ ಯಪಿಎ ಸಾಧನೆ, ಕಾಂಗ್ರೆಸ್

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X