ಮೈಸೂರಿಗೆ ಯುನೆಸ್ಕೋ ತಂಡದ ಭೇಟಿ
ಮೈಸೂರು, ಫೆ. 26 : ನವದೆಹಲಿಯಲ್ಲಿನ ಯುನೆಸ್ಕೋ ನಿರ್ದೇಶಕ ಮಿಸ್ ಮಿನ್ಜಾಯಂಗ್ ಇವರ ನೇತೃತ್ವದಲ್ಲಿ ಯುನೆಸ್ಕೋ ತಂಡದ ಇತರ ಸದಸ್ಯರಾದ ಮಿಸ್ ನಿಕೋಲ್, ಫ್ರಾನ್ಸ್ನ ಮಿಸ್ಟರ್ ಪೌಲ್ ಟ್ರಯಿಲೋಡ್, ಫ್ರಾನ್ಸ್ನ ಮಿಸ್ಟರ್ ಗೆರಾರ್ಡ್ ಗ್ಯಾಸಲೀನ್ ಅವರು ಮೈಸೂರಿಗೆ ಭೇಟಿ ನೀಡಿ ವೀಕ್ಷಿಸಿದರು.
ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳು, ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಮತ್ತು ಮೈಸೂರು ನಗರ, ಪಾರಂಪರಿಕ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಇತರೇ ಸ್ಟೇಕ್ ಹೋಲ್ಡರ್ ಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದು , ಮೈಸೂರಿನ ಸುತ್ತಮುತ್ತ ಪಾರಂಪರಿಕ ಸಂರಕ್ಷಣಾ ಚಟುವಟಿಕೆಗಳ ಬಗ್ಗೆ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸುವ ಬಗ್ಗೆ ಚರ್ಚಿಸಿದರು.
ಪಾರಂಪರಿಕ ಘಟಕ ಸ್ಥಾಪಿಸುವ, ಮಹತ್ವದ ತರಬೇತಿ ಮತ್ತು ಕಟ್ಟಡ ಚಟುವಟಿಕೆಗಳ ಸಾಮರ್ಥ್ಯ, ನಗರದ ಒಳಭಾಗದಲ್ಲಿನ ಸಂಚಾರವನ್ನು ಗುರುತಿಸುವುದು. ಸಾಮಾಜಿಕ ಆರ್ಥಿಕತೆಯ ಅಧ್ಯಯನ ಮಾಡುವುದು, ಸ್ಪಷ್ಟವಾದ ಮತ್ತು ಅಸ್ಪಷ್ಟವಾದ ಸ್ಮಾರಕಗಳನ್ನು , ವಿಷಯಗಳನ್ನು ಪಟ್ಟಿ ಮಾಡುವ ಬಗ್ಗೆ ಚರ್ಚಿಸಲಾಯಿತು. ಅನುಷ್ಠಾನಗೊಳಿಸುವ ಪ್ರಕ್ರಿಯೆಯನ್ನು ಸಹ ಸುದೀರ್ಘವಾಗಿ ಚರ್ಚಿಸಲಾಯಿತು.
ಈಗಾಗಲೇ ಗುರುತಿಸಲ್ಪಟ್ಟಿರುವ ಅಧಿಸೂಚಿತ ಕಟ್ಟಡಗಳು, ಹೆಚ್ಚುವರಿ ಸ್ಮಾರಕಗಳನ್ನು ಪಟ್ಟಿ ಮಾಡುವುದು, ತಾಂತ್ರಿಕತೆಯ ನಿಯಂತ್ರಣಕ್ಕಾಗಿ ನಿಬಂಧನೆಗಳನ್ನು ರೂಪಿಸುವುದು, ಖಾಸಗಿ ಮಾಲೀಕರಿಗೆ ಪ್ರೋತ್ಸಾಹ ನೀಡುವುದು, ಖಾಸಗಿ ಮಾಲೀಕತ್ವದ ತಾಂತ್ರಿಕತೆಯನ್ನು ತಿಳಿದುಕೊಳ್ಳುವ ಬಗ್ಗೆಯೂ ಸಹ ವಿವರವಾಗಿ ಚರ್ಚಿಸಲಾಯಿತು. ಮಾಸ್ಟರ್ ಪ್ಲಾನ್ಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ಬಗ್ಗೆಯೂ ಸಹ ಸಾಯಿ ಕನ್ಸಲ್ಟಿಂಗ್ ಇಂಜಿನಿಯರ್ಸ್ ಪ್ರೈ ಲಿ., ಅವರೊಂದಿಗೆ ಚರ್ಚಿಸಲಾಯಿತು ಮತ್ತು ಪಾರಂಪರಿಕ ದೃಷ್ಠಿಕೋನದ ಬಗ್ಗೆ ಮೈಸೂರು ನಗರದ ಮುಂದಿನ ಮಾಸ್ಟರ್ ಪ್ಲಾನ್ನಲ್ಲಿ ಅಳವಡಿಸುವ ಬಗ್ಗೆ ನಿಶ್ಚಯಿಸಲಾಯಿತು ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ರಾಯ್ಕರ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
40 ಸಾವಿರಕ್ಕೆ 10 ಜ್ಯೋತಿರ್ ಲಿಂಗಗಳ ದರ್ಶನ!
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications