ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ

ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ ಹಾಸನದಲ್ಲಿ ಕಾರ್ಯಕರ್ತರಿಂದ ಭಾರಿ ಒತ್ತಡ ಹೆಚ್ಚಿದೆ. ಸ್ಪರ್ಧಿಸಿದರೇ ಅಲ್ಲಿಂದಲೇ, ಬೇರೆ ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ ಎಂದರು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ. ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಜನಪರ ಕಾಳಜಿ ಇಟ್ಟುಕೊಂಡು ಹೋರಾಡುವವರ ವಿರುದ್ಧ ಪೊಲೀಸ್ ಪ್ರಕರಣ ದಾಖಲು ಮಾಡುವ ಮೂಲಕ ರಾಜಕೀಯ ಭಯೋತ್ಪಾದನೆ ಆರಂಭಿಸಿದೆ ಎಂದು ಆರೋಪಿಸಿದರು. ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನಕ್ಕೆ ವಿರೋಧಿಸಿ ಪ್ರತಿಭಟನೆಗಿಳಿದವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ಬಳ್ಳಾರಿ ಸೇರಿದಂತೆ ಮೂರು ಜಿಲ್ಲೆಯಲ್ಲಿ ರಾಜಕೀಯ ಶಕ್ತಿ ಇರುವ ಮೂವರು ಸಚಿವರಿದ್ದಾರೆ. ಅವರುಗಳ ಮಾತಿಲ್ಲದೆ ಏನೂ ನಡೆಯುವಂತಿಲ್ಲ. ಅಧಿಕಾರಿಗಳು ಇಕ್ಕಟ್ಟಿನಲ್ಲಿ ಸಿಲುಕಿಕೊಂಡು ಪರಾದಾಡುತ್ತಿದ್ದಾರೆ. ರಾಜ್ಯದಲ್ಲಿ ಕಂದಾಯ ಮತ್ತು ಗೃಹ ಇಲಾಖೆಗಳು ಜನರ ಪಾಲಿಗೆ ಸತ್ತು ಹೋಗಿವೆ. ಈ ಬಗ್ಗೆ ಮುಖ್ಯಮಂತ್ರಿಗಳು ಕಣ್ಣು ತೆರೆದು ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ದೇವೇಗೌಡ ಒತ್ತಾಯಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications