ಮಹಿಳಾ ಆಯೋಗದಿಂದ ನಿರ್ಮಲಾ ವಜಾ
ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. ತನಿಖೆ ಕುರಿತು ಬಹಿರಂಗ ಹೇಳಿಕೆ ನೀಡಿದ ಆಕೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ಹೇಳಲಾಗಿದೆ.
ಸಮರ್ಥನೆ ನೀಡುವಂತೆ ನಿರ್ಮಾಲಾ ವೆಂಕಟೇಶ್ ಅವರಿಗೆ ಷೋಕಾಸ್ ನೋಟೀಸ್ ನೀಡಲಾಗಿತ್ತು. ಶಿಸ್ತುಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿತ್ತು. ಆದರೆ ನಿರ್ಮಾಲಾ ವೆಂಕಟೇಶ್ ನೀಡಿರುವ ಉತ್ತರ ಸಮರ್ಪಕವಾಗಿಲ್ಲ ಎಂದು ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
ಪಬ್ ನಲ್ಲಿ ಸಾಕಷ್ಟು ಭದ್ರತೆ ಇಲ್ಲ. ಮಹಿಳೆಯರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕು ಎಂದು ನಿರ್ಮಾಲಾ ವೆಂಕಟೇಶ್ ಹೇಳಿದ್ದರು. ತನಿಖೆಯ ಜಾಡು ತಪ್ಪಿಸಲು ಅವರು ಪಬ್ ಪರವಾನಗಿ ಹೊಂದಿತ್ತೇ ಎಂದು ಪ್ರಶ್ನಿಸಿದ್ದರು. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಅವರ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ರದ್ದುಗೊಳಿಸಿತ್ತು.
(ಏಜೆನ್ಸೀಸ್)