ಬಸ್ ತೂಗಾಟದಿಂದ ನಾಲ್ವರಿಗೆ ಗಾಯ
ಬೆಂಗಳೂರು, ಮಾ. 1: ನಗರದ ಪ್ರಮುಖ ವಾಹನ ದಟ್ಟಣೆಯ ಸ್ಥಳವಾದ ಕೆಆರ್ ಪುರಂ ತೂಗುಸೇತುವೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಪಘಾತದಿಂದ ನಾಲ್ವರಿಗೆ ಗಾಯಗಳಾಗಿವೆ. ಬಿಎಂಟಿಸ್ ಬಸ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ ಉಂಟಾದ ಪರಿಣಾಮ, ತೂಗುಸೇತುವೆಯ ತಡೆಗೋಡೆಗೆ ಗುದ್ದಿಕೊಂಡು ಬಸ್ ನ ಮುಂಭಾಗ ಸೇತುವೆಯ ಹೊರಭಾಗಕ್ಕೆ ಬಂದು ತೂಗಾಡತೊಡಗಿತ್ತು ಎನ್ನಲಾಗಿದೆ.
ರಾತ್ರಿ ಸುಮಾರು 9 ಗಂಟೆಗೆ ಸಂಭವಿಸ್ಸಿದ ಈ ದುರ್ಘಟನೆಯಲ್ಲಿ ಬಸ್ ನಲ್ಲಿದ್ದ 35 ಕ್ಕೂ ಹೆಚ್ಚು ಜನ ಪ್ರಾಣಾಪಯವಿಲ್ಲದೆ ಪಾರಾಗಿದ್ದಾರೆ. ಬಸ್ ಚಾಲಕನ ಕಾಲು ಮುರಿದಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತರೆ ಗಾಯಾಳುಗಳನ್ನು ಕೆಆರ್ ಪುರಂನ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ.
ಘಟನೆ ನಡೆದ ಬಗೆ :ಬಸ್ ಎದುರಿಗೆ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಳ್ಳುವ ಯತ್ನದಲ್ಲಿ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರಾಕ್ಟರ್ ಮೂರು ತುಂಡಾಗಿದೆ. ಈ ಘಟನೆಯಿಂದ ಮೂರು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಪೊಲೀಸ್ ಅಧಿಕಾರಿ ಉಮೇಶ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications