ಹೊರಗುತ್ತಿಗೆಗೆ ಬೆಂಗಳೂರು ಸುರಕ್ಷಿತವಲ್ಲ, ವರದಿ
ಬೆಂಗಳೂರು, ಮಾ. 2 : ಭಾರತದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಉಗ್ರರ ದಾಳಿಗಳಿಂದ ಉದ್ಯಮಗಳಿಗೆ ಭಾರಿ ಹೊಡೆತ ಬೀಳತೊಡಗಿದೆ. ಅಮೆರಿಕ ಬ್ರೌನ್-ವಿಲ್ಸನ್ ಸಮೂಹ ನಡೆಸಿದ ಸರ್ವೆ ಪ್ರಕಾರ ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಅಪಾಯಕಾರಿ ನಗರ ಎಂಬ ಅಪಖ್ಯಾತಿ ಒಳಗಾಗಿರುವ ನಗರವಾಗಿದೆ.
ಭಾರತದಲ್ಲಿ ಭದ್ರತೆ ಕೊರತೆ ಇದ್ದು, ಹೊರಗುತ್ತಿಗೆ ವಹಿವಾಟಿಗೆ ಪೂರಕ ವಾತಾವರಣ ಇಲ್ಲವಾಗಿದೆ ಎಂದು ಬ್ರೌನ್-ವಿಲ್ಸನ್ ಸಮೂಹದ ವರದಿ ಸಹ ಮುಖ್ಯಸ್ಥ ಡೌಗ್ ಬ್ರೌನ್ ಅವರು 2009ರ ದಿ ಇಯರ್ ಆಫ್ ಔಟ್ ಸೋರ್ಸಿಂಗ್ ರಿಪೋರ್ಟ್ ನಲ್ಲಿ ಹೇಳಿದ್ದಾರೆ. ಭಯೋತ್ಪಾದಕ ಕೃತ್ಯಗಳ ಇತ್ತೀಚೆಗೆ ಅವ್ಯಾಹತವಾಗಿ ನಡೆಯುತ್ತಿರುವುದರಿಂದ ಕಾರ್ಯ ನಿರ್ವಹಿಸುವುದು ಕಷ್ಟಕರ ಎಂಬ ವಾತಾವರಣ ಸೃಷ್ಟಿಯಾಗಿದೆ ಎಂದು ಅವರು ಹೇಳಿದ್ದಾರೆ.
ಇದರ ಜೊತೆಗೆ ಹೊರಗುತ್ತಿಗೆ ನಡೆಸುವುದಕ್ಕೆ ಮೂಲಭೂತ ಸೌಕರ್ಯಗಳು ಅತ್ಯಂತ ಕೆಟ್ಟದಾಗಿವೆ. ಇಂದಿನ ಸ್ಥಿತಿಯಲ್ಲಿ ಉದ್ಯಮ ಹೇಳಿ ಮಾಡಿಸಿದ ಸ್ಥಳ ಭಾರತ ಅಲ್ಲ ಎಂದು ಹೇಳಬಹುದು ಎಂದಿದ್ದಾರೆ. ಬೆಂಗಳೂರು ಅಪಾಯಕಾರಿ ನಗರ ಎಂಬುದಕ್ಕೆ ಕೆಲ ಉದಾಹರಣೆಗಳನ್ನು ಅವರು ನೀಡಿದ್ದಾರೆ. ಮುಖ್ಯವಾಗಿ, ಭಯೋತ್ಪಾದನೆ, ಯುದ್ಧ ಭೀತಿ, ರಾಜಕೀಯ ಅಸ್ಥಿರತೆ, ಪರಿಸರ ತೊಂದರೆ, ಅಪರಾಧಿ ಪ್ರಕರಣಗಳು, ರೋಗ ರುಜಿನಗಳು ಹೊರಗುತ್ತಿಗೆ ಹಿನ್ನೆಡೆಯಾಗಿದೆ ಎಂದು ಬ್ರೌನ್ ತಿಳಿಸಿದ್ದಾರೆ. ಬೆಂಗಳೂರು ಭಾರತದ ಇತರೆ ನಗರಗಳಾದ ಹೈದರಾಬಾದ್, ಚೆನ್ನೈ, ಪುಣೆ, ಕೋಲ್ಕತ್ತಾ ಅಪಾಯಕಾರಿ ನಗರಗಳ ಪಟ್ಟಿಯಲ್ಲಿವೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications