ರಾಮಸ್ವಾಮಿ ಪಾಳ್ಯದಲ್ಲಿ ಬಿಪಿಒ ಉದ್ಯೋಗಿ ಕೊಲೆ
ಬೆಂಗಳೂರು, ಮಾ, 2 : ನಾಲ್ಕು ಜನರ ಡಕಾಯಿತರ ತಂಡವೊಂದು ಮನೆಗೆ ನುಗ್ಗಿ ಬಿಪಿಒ ಉದ್ಯೋಗಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ಸೋಮವಾರ ಬೆಳಗಿನ ಜಾವ 5.30ರ ಸುಮಾರಿಗೆ ನಡೆದಿದೆ.
ತಮಿಳುನಾಡಿನ ಈರೋಡ್ ಪಟ್ಟಣದ ಉಮೇಶ್ ಕೃಷ್ಣನ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮೃತನ ಪತ್ನಿ ಅನಿಮೇರಿಯನ್ನು ಸಹ ದರೋಡಕೋರರು ಹತ್ಯೆ ಮಾಡಲು ಯತ್ನಿಸಿದ್ದಾರೆ. ಆದರೆ, ಅನಿಮೇರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಿನ್ನದ ಬಳೆ, ಮಾಂಗಲ್ಯ ಸರ, ನಗದು, ಮೋಬೈಲ್ ಗಳನ್ನು ದೋಚಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ ಎಂದು ಪೊಲೀಸರ್ ತಿಳಿಸಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ, ತನಿಖೆ ಆರಂಭಿಸಲಾಗಿದೆ.
ಅಕ್ರಮ ಸಂಬಂಧ ಕೊಲೆ
ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನ್ನ ಅಮ್ಮನೊಂದಿಗೆ ಅಕ್ರಮ ಸಂಬಂಧಿವಿರಿಸಿಕೊಂಡಿದ್ದ ವ್ಯಕ್ತಿಯನ್ನು ಆಕೆ ಮಗನೆ ವ್ಯಕ್ತಿಯನ್ನು ಮಚ್ಚಿನಿಂದ ಕೊಲೆಗೈದು ನಂತರ ಪೊಲೀಸರಿಗೆ ಶರಣಾದ ಘಟನೆ ಸೋಮವಾರ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ. ಕೊಲೆಯಾದ ವ್ಯಕ್ತಿ ಕೃಷ್ಣಪ್ಪ. ಕೊಲೆ ಮಾಡಿದಾತ 15 ವರ್ಷದ ಜಯರಾಮ್ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications