ಸೇನೆ ಕಾರ್ಯಕರ್ತರ ಗಡಿಪಾರು, ಮುತಾಲಿಕ್ ಕಿಡಿ
ಮಂಗಳೂರು, ಮಾ. 2 : ಶ್ರೀರಾಮಸೇನೆಯ ಕಾರ್ಯಕರ್ತರನ್ನು ಗಡಿಪಾರು ಮಾಡಿರುವ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ಹತ್ತು ಸಾವಿರ ಮಂದಿ ಕಾರ್ಯಕರ್ತರೊಂದಿಗೆ ಮಂಗಳೂರಿಗೆ ಬರುತ್ತೇವೆ, ನಿಮಗೆ ತಾಕತ್ತಿದ್ದರೆ ನಮ್ಮನ್ನು ತಡೆಯಿರಿ ಎಂದು ಜಿಲ್ಲಾಡಳಿತಕ್ಕೆ ಅವರು ಬಹಿರಂಗ ಸವಾಲು ಹಾಕಿದ್ದಾರೆ.
ಹಿಂದುತ್ವ ಮರೆತು ಕಾರ್ಯ ನಿರ್ವಹಿಸಿದ ಕಾಂಗ್ರೆಸ್ ಗತಿ ರಾಜ್ಯದಲ್ಲಿ ಏನಾಗಿದೆ ಎಂದು ನಿಮಗೆ ಚೆನ್ನಾಗಿ ಗೊತ್ತು. ನೀವು ಅಧಿಕಾರದ ಅಮಲಿನಲ್ಲಿ ರಾಜ್ಯ ನಡೆಸುತ್ತಿದ್ದಿರಾ, ರಾಜ್ಯದ ಜನತೆ ನಿಮಗೆ ಪಾಠ ಕಲಿಸುವ ಮುಂಚೆ ಎಚ್ಚೆತ್ತು ಕೊಳ್ಳಿ ಎಂದು ಬಿಜೆಪಿಗೆ ಬುದ್ದಿಮಾತು ಹೇಳಿದರು.
ಈ ಮಧ್ಯೆ ಪಿಂಕ್ ಚಡ್ಡಿ ಕಳುಹಿಸಿರುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಹೇಳಿರುವ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ರೇಣುಕಾ ಚೌಧುರಿ, ಚಡ್ಡಿಯ ಬಣ್ಣ ಮುತಾಲಿಕ್ ಅವರಿಗೆ ಹಿಡಿಸಲಿಲ್ಲವೇನೂ ಅದಕ್ಕೆ ಕ್ರಿಮಿನಲ್ ಮೊಕದ್ದಮೆ ಹೂಡುತ್ತಿದ್ದಾರೆ ಎಂದು ಛೇಡಿಸಿದ್ದಾರೆ.
ಪಬ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಶ್ರೀರಾಮಸೇನೆಯ ಪ್ರಸಾದ್ ಅತ್ತಾವರ ಸೇರಿದಂತೆ ಐದು ಮಂದಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ವಿವರಣೆ ಕೇಳಿ ನೋಟಿಸ್ ಜಾರಿಗೊಳಿಸಿತ್ತು. ಅದರಲ್ಲಿ ಮೂರು ಮಂದಿ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗಿದ್ದರೆ ಉಳಿದ ಇಬ್ಬರಿಗೆ ಜಿಲ್ಲಾಡಳಿತ ಗಡಿಪಾರು ಮಾಡಿ ಆದೇಶ ಹೊರಡಿಸಿತ್ತು.
(ದಟ್ಸ್ ಕನ್ನಡ ವಾರ್ತೆ)
ಶ್ರೀರಾಮಸೇನೆ ಕಾರ್ಯಕರ್ತರಿಗೆ ಗಡಿಪಾರು
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications