ಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ

ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿರುವ ನಾನು ನೀಡಿರುವ ವರದಿ ಸಂಪೂರ್ಣ ಪಾರದರ್ಶಕವಾಗಿದೆ. ಆದರೆ, ಕೇಂದ್ರ ಸರ್ಕಾರ ಈ ವರದಿಯನ್ನು ಏಕೆ ನಿರಾಕರಿಸಿದರು ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಅವರು ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಕ್ರಮ ಕಾನೂನು ವಿರೋಧಿಯಾಗಿದ್ದು, ಇದನ್ನು ಪ್ರಶ್ನಿಸಿ ನ್ಯಾಯಾಲಯ ಮೆಟ್ಟಿಲು ಏರುವುದಾಗಿ ಅವರು ಹೇಳಿದ್ದಾರೆ. ಮಂಗಳೂರು ಪಬ್ ದಾಳಿಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ದಾಳಿಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದ ಮೇಲೆ ನಿರ್ಮಲಾ ನೀಡಿರುವ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು.
(ದಟ್ಸ್ ಕನ್ನಡ ವಾರ್ತೆ)
ಮಹಿಳಾ ಆಯೋಗದಿಂದ ನಿರ್ಮಲಾ ವಜಾ












Click it and Unblock the Notifications