ಪ್ರಜ್ಞಾವಂತರಿಂದ 'ಬಿಜೆಪಿ ಮಿತ್ರ' ಮಂಡಳಿ ಸ್ಥಾಪನೆ
ಮುಂಬೈ, ಮಾ. 4 : ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಮಾತ್ರವಲ್ಲ ರಾಜಕೀಯೇತರ ಸಂಘಟನೆಗಳು ಚುರುಕಾಗುತ್ತಿವೆ. ಕೇಂದ್ರದಲ್ಲಿ ಬಿಜೆಪಿ ಮಾತ್ರ ಅತ್ಯುತ್ತಮ ಸರ್ಕಾರ ರಚಿಸಬಲ್ಲದು ಎಂದು ನಂಬಿರುವ ವೃತ್ತಿಪರರು, ಉದ್ಯಮಿಗಳು ಮತ್ತು ಯುವ ನಾಗರಿಕರು ರಚಿಸಿರುವ ತಂಡ 'ಬಿಜೆಪಿ ಮಿತ್ರರು' ಎಂಬ ಸಂಘಟನೆಯನ್ನು ಹುಟ್ಟುಹಾಕಿದ್ದಾರೆ.
ಪ್ರಭಾದೇವಿಯಲ್ಲಿರುವ ರವೀಂದ್ರ ನಾಟ್ಯ ಮಂದಿರದಲ್ಲಿ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಜೇಟ್ಲಿ ಉದ್ಘಾಟಿಸಿದರು. ಸುಮಾರು 1500 ಜನರಿರುವ ಸಂಘಟನೆಯಲ್ಲಿರುವವರು ಯಾರೂ ಬಿಜೆಪಿ ಸದಸ್ಯರಲ್ಲ. ಆದರೆ, ಬಿಜೆಪಿ ಬಗ್ಗೆ ಒಲವು ಹೊಂದಿರುವವರು. ಸಂಘಟನೆಯ ಕಾರ್ಯಕರ್ತರು ಮುಂಬೈ ಮಾತ್ರವಲ್ಲ ಪುಣೆಯಲ್ಲಿಯೂ ಸಭೆ ಸೇರಿತು.
ಹೊಸದಾಗಿ ಪ್ರಾರಂಭಿಸಿರುವ www.friendsofbjp.org ಅಂತರ್ಜಾಲ ತಾಣ ಮತ್ತು ಎಸ್ಎಮ್ಎಸ್ ಮುಖಾಂತರ ಜನತೆಯನ್ನು ಸಂಪರ್ಕಿಸಲು ತೀರ್ಮಾನಿಸಿದೆ. ಮತ ಚಲಾವಣೆಯ ಬಗ್ಗೆ ಜನರಲ್ಲಿರುವ ಉದಾಸೀನತೆಯನ್ನು ಹೊಡದೋಡಿಸಿ ಎಚ್ಚರಿಕೆ ಮೂಡಿಸುವುದು ಬಿಜೆಪಿ ಮಿತ್ರ ಸಂಘಟನೆಯ ಮೂಲ ಉದ್ದೇಶ. ಅಂತರ್ಜಾಲ ತಾಣದಲ್ಲಿ ಕಾಂಗ್ರೆಸ್ ವಿರುದ್ಧ ಈ ಸಂಘಟನೆ ಹರಿಹಾಯ್ದಿದೆ.
ಈ ಸಂಘಟನೆಯ ಹುಟ್ಟು ಮೊಳೆತಿದ್ದು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮುಂಬೈ ಮತ್ತು ನ್ಯೂಯಾರ್ಕ್ ಕೋಲಂಬಿಯಾ ವಿಶ್ವವಿದ್ಯಾಲಯದ ಪದವೀಧರರಾಗಿರುವ 42ರ ಹರೆಯದ ರಾಜೇಶ್ ಜೈನ್ ಎಂಬುವವರಲ್ಲಿ. "ಇಷ್ಟು ದಿನ ಬಿಜೆಪಿಯ ಮೂಕ ಬೆಂಬಲಿಗರಾಗಿದ್ದೆವು. ಆದರೆ, ಈ ಚುನಾವಣೆಯಲ್ಲಿ ಬೇರೇನನ್ನಾದರೂ ಮಾಡಲೇಬೇಕು ಎಂಬ ಉದ್ದೇಶದಿಂದ ಈ ಸಂಘಟನೆ ಹುಟ್ಟುಹಾಕಿದ್ದೇವೆ" ಎನ್ನುತ್ತಾರೆ ರಾಜೇಶ್.
"ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವುದು ಮಾತ್ರವಲ್ಲ, ಅಗತ್ಯ ಬಿದ್ದರೆ ಯಾವುದೇ ಸರ್ಕಾರದ ವಿರುದ್ಧ ದನಿ ಎತ್ತಲು ಸಿದ್ಧರಾಗಿದ್ದೇವೆ" ಎಂದು ಬಿಜೆಪಿ ಮಿತ್ರ ಸಂಘಟನೆಯ ಕಾರ್ಯಕರ್ತರೊಬ್ಬರು
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications