Get Updates
Get notified of breaking news, exclusive insights, and must-see stories!

ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ, ವಿದ್ಯಾಶಂಕರ್

ಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಅಧಿಕಾರಿ ಎಂ ಎನ್ ವಿದ್ಯಾಶಂಕರ್ ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈಗೊಂಡಂತೆ ಈ ಬಾರಿಯು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಸುಧಾರಣೆ, ಭದ್ರತೆ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು. ರಾಜ್ಯದಲ್ಲಿ 46,050 ಮತಗಟ್ಟೆ ಮತ್ತು ಬೆಂಗಳೂರಿನಲ್ಲಿ 7,000 ಮತಗಟ್ಟೆಯಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಗಟ್ಟಲು ಹೆಚ್ಚಿನ ಸಂಖ್ಯೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಅವರಿಗೆ ಅಗತ್ಯ ತರಬೇತಿ ನೀಡಲಾಗುವುದು. ಸಹಾಯವಾಣಿ ನಿಯಂತ್ರಣ ಕೊಠಡಿ ಆರಂಭಿಸಲಾಗುವುದು ಎಂದರು.

ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು, ನಗರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಕಿರುವ ಬಂಟಿಂಗ್ಸ್, ಬ್ಯಾನರ್ ಹಾಗೂ ಭಿತ್ತಿಪತ್ರಗಳನ್ನು ತೆಗೆಯುವ ಕಾರ್ಯದಲ್ಲಿ 12 ತಂಡಗಳು ನಿರತವಾಗಿವೆ. ಮತದಾರರಿಗೆ ಈಗಾಗಲೇ 1.50 ಲಕ್ಷ ಗುರುತಿನ ಚೀಟಿ ವಿತರಿಸಲಾಗಿದೆ ಎಂದು ವಿದ್ಯಾಶಂಕರ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+