ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ

ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ ಸ್ಥಾನದಲ್ಲಿ ನವೀನ ಚಾವ್ಲಾ ಅವರನ್ನು ನೇಮಕ ಮಾಡಲಾಗಿದೆ. ಚುನಾವಣಾ ಆಯುಕ್ತ ನವೀನ ಚಾವ್ಲಾ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ. ಕಾಂಗ್ರೆಸ್ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಅವರನ್ನು ಚುನಾವಣೆ ಆಯುಕ್ತ ಸ್ಥಾನದಿಂದ ವರ್ಗಾಯಿಸಬೇಕು ಎಂದು ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಕವಡೆ ಕಾಸಿನ ಬೆಲೆ ಸಿಕ್ಕಿಲ್ಲ ಎನ್ನುವುದು ವಿಶೇಷ.
ಗೋಪಾಲಸ್ವಾಮಿ ಅವರು ಬರೆದಿದ್ದ ಪತ್ರ ರಾಜಕೀಯ ತಿರುವು ಪಡೆದುಕೊಂಡಿತ್ತು, ನವೀನ ಚಾವ್ಲಾ ಬೆನ್ನಿಗೆ ಯುಪಿಎ ಸರ್ಕಾರ ನಿಂತಿತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಮುಖ್ಯ ಚುನಾವಣಾ ಆಯುಕ್ತರ ಪತ್ರವನ್ನು ತಡೆ ಹಿಡಿದಿತ್ತು. ಕೊನೆಗೂ ನವೀನ ಚಾವ್ಲಾ ಅವರನ್ನು ಮುಖ್ಯ ಚುನಾವಣೆ ಅಧಿಕಾರಿಯನ್ನಾಗಿ ನೇಮಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ.
(ಏಜನ್ಸೀಸ್)
ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಆಯುಕ್ತ












Click it and Unblock the Notifications