ಜಾಫರ್ ಷರೀಫ್ ವಿರುದ್ದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಇಲ್ಲ
ಬೆಂಗಳೂರು, ಮಾ. 5 : ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಿ ಕೆ ಜಾಫರ್ ಷರೀಫ್ ಅವರನ್ನು ಕಣಕ್ಕಿಳಿಸಿದರೆ ಜನತಾದಳ (ಎಸ್) ಈ ಕ್ಷೇತ್ರದಲ್ಲಿ ತನ್ನ ಉಮೇದುವಾರರನ್ನು ನಿಲ್ಲಿಸುವುದಿಲ್ಲ ಎಂದು ಜನತಾದಳ ವರಿಷ್ಠ ಎಚ್ ಡಿ ದೇವೇಗೌಡ ಘೋಷಿಸಿದ್ದಾರೆ.
ಒಂದು ಕಾಲದ ದೇವೇಗೌಡರ ಆಪ್ತರಾಗಿದ್ದು, ಇದೀಗ ಬದ್ದ ವಿರೋಧಿಯಾಗಿರುವ ಸಿ ಎಂ ಇಬ್ರಾಹಿಮ್ ಬೆಂಗಳೂರು ಕೇಂದ್ರದ ಕಾಂಗ್ರೆಸ್ಸಿನ ಇನ್ನೊಬ್ಬ ಅಭ್ಯರ್ಥಿಯಾಗಿದ್ದಾರೆ. ಇಬ್ರಾಹಿಂ ಅವರಿಗೆ ಟಿಕೆಟ್ ತಪ್ಪಿಸಲು ಗೌಡರು ಈ ತಂತ್ರ ರೂಪಿಸಿದ್ದಾರೆ. ಈ ಮೂಲಕ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವ ತಮ್ಮ ಎಂದಿನ ರಾಜಕೀಯ ಚತುರತೆಯನ್ನು ದೇವೇಗೌಡರು ಪ್ರದರ್ಶಿಸಿದ್ದಾರೆ.
ಚಾಮರಾಜಪೇಟೆ ಶಾಸಕರಾಗಿರುವ ಜಮೀರ್ ಅಹ್ಮೆದ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಲು ಗೌಡರು ಬಯಸಿದ್ದರು. ಆದರೆ ಜಾಫರ್ ಷರೀಫ್ ಸ್ಪರ್ಧಿಸಿದರೆ ತಾನು ಸ್ಪರ್ಧಿಸುವುದಿಲ್ಲ ಎಂದು ಜಮೀರ್ ತನ್ನ ಇಂಗಿತ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ದೇವೇಗೌಡ ಅವರನ್ನು ಬುಧವಾರ ಜಾಫರ್ ಷರೀಫ್ ಭೇಟಿಯಾಗುವ ತನಕ ತನ್ನ ಉಮೇದುವಾರಿಕೆಯನ್ನು ಸಲ್ಲಿಸಿರಲಿಲ್ಲ ಎಂದು ತಿಳಿದುಬಂದಿದೆ.
ದೇವೇಗೌಡ ಪ್ರಧಾನಿಯಾಗಿದ್ದಾಗ ಇಬ್ರಾಹಿಂ ಕೇಂದ್ರದ ಕ್ಯಾಬಿನೆಟ್ ಸಚಿವರಾಗಿದ್ದರು. ಆನಂತರ ಸಿದ್ದರಾಮಯ್ಯ ಜನತಾದಳ ತೊರೆದಾಗ ಇವರು ಕೂಡ ಪಕ್ಷದ ವರಿಷ್ಠರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಜನತಾದಳ ತೊರೆದು ಕಾಂಗ್ರೆಸ್ ಸೇರಿದ್ದರು.
(ದಟ್ಸ್ ಕನ್ನಡ ವಾರ್ತೆ)
ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications