ಎಫ್.ಡಿ.ಎ.: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು, ಮಾ5 : ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕರು/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮತ್ತು ವಿವಿಧ ಮೀಸಲಾತಿಯಲ್ಲಿ ಆಯಾ ಮೀಸಲಾತಿಯಡಿ ಆಯ್ಕೆಯಾಗಿರುವ ಕೊನೆಯ ಅಭ್ಯರ್ಥಿಗಳ ಅಂಕಗಳು ಮತ್ತು ಜನ್ಮ ದಿನಾಂಕವನ್ನು ಆಯೋಗದ ವೆಬ್ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾರ್ಚ್16 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಆಯೋಗದ ಪ್ರಕಟಣೆ ತಿಳಿಸಿದೆ.
ಎಸ್ಡಿಸಿ ನೇಮಕಾತಿ: ಮೂಲದಾಖಲೆ ಪರಿಶೀಲನೆ
ಕರ್ನಾಟಕ ಲೋಕಸೇವಾ ಆಯೋಗವು 2008 ರ ಜೂನ್ನಲ್ಲಿ ನಡೆಸಿದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಮತ್ತು ಅವರ ಮೀಸಲಾತಿಗಳಿಗೆ ಅನುಗುಣವಾಗಿ ಅರ್ಹರಾದ ಅಭ್ಯರ್ಥಿಗಳನ್ನು 1:2ರ ಅನುಪಾತದಲ್ಲಿ ಮಾರ್ಚ್ 6 ಹಾಗೂ 7ರಂದು ಎರಡನೇ ಹಂತದ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಪ್ರತಿಯೊಂದು ಮೀಸಲಾತಿಯಡಿ ಆಯ್ಕೆಯಾದ ಕೊನೆಯ ಅಭ್ಯರ್ಥಿಯ ಕಟ್ಆಫ್ ಅಂಕಗಳು ಮತ್ತು ಅವರ ಜನ್ಮ ದಿನಾಂಕದ ವಿವರಗಳನ್ನು ಆಯೋಗದ ವೆಬ್ಸೈಟ್ http://kpsc.kar.nic.in/cutoff ನಲ್ಲಿ ಪ್ರಕಟಿಸಲಾಗಿದೆ.
ಈ ಅಭ್ಯರ್ಥಿಗಳಿಗೆ ವೈಯಕ್ತಿಕ ಸೂಚನಾ ಪತ್ರಗಳನ್ನು ಸಹ ಕಳುಹಿಸಲಾಗಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳಲ್ಲಿ ಕೊನೆಯ ಅಭ್ಯರ್ಥಿಗಿಂತ ಹೆಚ್ಚು ಅಂಕ ಗಳಿಸಿದ್ದು, ಆಯೋಗದ ವೆಬ್ಸೈಟಿನಲ್ಲಿ ಅವರ ನೋಂದಣಿ ಸಂಖ್ಯೆ ಪ್ರಕಟವಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮಾರ್ಚ್ 7ರೊಳಗೆ ಈ ಸಂಬಂಧ ಆಯೋಗವನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications