ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೊಡಿ: ಸಂಜು
ನವದೆಹಲಿ, ಮಾ.5: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಅವಕಾಶ ಕಲ್ಪಿಸಬೇಕು ಎಂದು ಬಾಲಿವುಡ್ ನಟ ಸಂಜಯ್ ದತ್ ನ್ಯಾಯಾಲಯವನ್ನು ಕೋರಿದ್ದಾರೆ.
ಈ ಸಂಬಂಧ ಸಂಜಯ್ ದತ್ ಗುರುವಾರ ಸುಪ್ರೀಂ ಕೋರ್ಟ್ ಗೆ ತಮ್ಮ ಅಹವಾಲನ್ನು ಸಲ್ಲಿಸಿದರು. ಸಂಜಯ್ ದತ್ 1993ರ ಮುಂಬೈ ಸ್ಫೋಟಕ್ಕೆ ಸಂಬಂಧಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಅವರ ಮೇಲೆ ನ್ಯಾಯಾಲಯದ ಕೇಸು ಇರುವ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಪರಿಸ್ಥಿತಿ ಹೀಗಿದ್ದ್ದುಕೊಂಡು ಅವರು ಸಮಾಜವಾದಿ ಪಕ್ಷದಿಂದ ಲಕ್ನೊ ಕ್ಷೇತ್ರದಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ.
ತಾನು ಉದ್ದೇಶಪೂರಕವಾಗಿ ತಪ್ಪು ಮಾಡಿಲ್ಲ ಎಂದು ವಿಶೇಷ ನ್ಯಾಯಾಲಯ ಸಹ ಅಭಿಪ್ರಾಯ ಪಟ್ಟಿರುವ ಕಾರಣ ತಡೆಯಾಜ್ಞೆ ನೀಡಬೇಕು ಎಂದು ಅವರು ವಿನಂತಿಸಿಕೊಂಡರು. ಅವರ ಮನವಿಯನ್ನು ಕೋರ್ಟ್ ಅನುಮೋದಿಸಿದ್ದೇ ಆದರೆ ಅವರು ಬರಲಿರುವ ಚುನಾವಣೆಗೆ ಸ್ಪರ್ಧಿಸಬಹುದು. ಈ ಕೇಸನ್ನ್ನು ನ್ಯಾಯಾಲಯ ಶುಕ್ರವಾರ ವಿಚಾರಣೆ ಮಾಡಲಿದೆ.
(ಏಜೆನ್ಸೀಸ್)











Click it and Unblock the Notifications