ಲೋಕಸಭೆ ಚುನಾವಣೆ, ಮಾರ್ಚ್ 8ಕ್ಕೆ ಸಭೆ, ಮುತಾಲಿಕ್
ಗುಲ್ಬರ್ಗಾ, ಮಾ. 5 : ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲು ಮಾರ್ಚ್ 8 ರಂದು ಸಂಘಟನೆಯ ಎಲ್ಲ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಏಪ್ರಿಲ್ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಸಂಘಟನೆ ವತಿಯಿಂದ ಯಾರೂ ಸ್ಪರ್ಧಿಸುವುದಿಲ್ಲ. ಆದರೆ, ಚುನಾವಣೆಯಲ್ಲಿ ಯಾರಿಗೆ ಬೆಂಬಲಿಸಬೇಕು ಎನ್ನುವ ಕುರಿತು ಚರ್ಚೆ ನಡೆಸಲಾಗುವುದು. 15 ಅಂಶಗಳ ಪಟ್ಟಿಯನ್ನು ತಯಾರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವ ಪಕ್ಷಕ್ಕೆ ಬೆಂಬಲ ಸೂಚಿಸಲಾಗುವುದು ಎಂದು ಅವರು ಹೇಳಿದರು. ಶ್ರೀಲಂಕಾ ತಂಡದ ಮೇಲೆ ನಡೆದ ದಾಳಿ ಖಂಡನೀಯ. ಪಾಕಿಸ್ತಾನ ಸರ್ಕಾರದಿಂದಲೇ ಈ ಕೃತ್ಯ ನಡೆದಿದೆ ಎಂದು ಅವರು ಮತ್ತೊಮ್ಮೆ ಆರೋಪಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications