ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರಲ್ಲದೆ, ಸಿಕ್ಕ ಸಮಯವನ್ನು ಕುಮಾರಸ್ವಾಮಿ ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಪುತ್ರ ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ದೇವರಾಣೆ ಮಾಡಿದ್ದ ಯಡಿಯೂರಪ್ಪ ಅವರ ಆಣೆ ಪ್ರಮಾಣ ಎಲ್ಲಿಗೆ ಹೋಯಿತು. ದೇವರ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಾತ್ರರಾಗಿರುವ ಅವರು, ದೇವರ ಸನ್ನಧಿಯಲ್ಲಿ ನಿಂತು ಮಾಡಿರುವ ಆಣೆ ಇಷ್ಟ ಬೇಗ ಮರೆತು ಹೋಯಿತೇ ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಸುಳ್ಳಿನ ಸರದಾರ. ರಾಮಚಂದ್ರಪುರ ಮಠ ರಾಘವೇಶ್ವರ ಸ್ವಾಮಿಗಳು ಮೂಲಕ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮೇಲೆ ಪ್ರಭಾವ ಬೀರಿ ರಾಘವೇಂದ್ರನ ಟಿಕೆಟ್ ಕೊಡಿಸಲು ಯಡಿಯೂರಪ್ಪ ಸಫಲರಾಗಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಜೆಡಿಎಸ್ ಪಕ್ಷವನ್ನು ಅಪ್ಪ ಮಕ್ಕಳ ಎಂದು ಹೀಯಾಳಿಸುತ್ತಿದ್ದ ಯಡಿಯೂರಪ್ಪ ಅವರು, ತಮ್ಮ ಪುತ್ರನನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಾಡಿದ ಸಾಹಸ ಅಷ್ಟಿಷ್ಟಲ್ಲ ಎಂದು ಕಿಡಿಕಾರಿದರು. ಬಿಜೆಪಿ ಕೂಡ ಅಪ್ಪ ಮಕ್ಕಳ ಪಕ್ಷವಾಗಿದೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
(ದಟ್ಸ್ ಕನ್ನಡ ವಾರ್ತೆ)
ಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ ಖಚಿತ











Click it and Unblock the Notifications