ದೇವೇಗೌಡರಿಗೆ ಬುದ್ಧಿ ಇಲ್ಲ, ಜನಾರ್ದನರೆಡ್ಡಿ

ಶುಕ್ರವಾರ ನಗರದ ಪಕ್ಷ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಅನಗತ್ಯವಾಗಿ ದೇವೇಗೌಡರು ಎಲ್ಲ ವಿಷಯದಲ್ಲಿ ತೆಲೆಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ದೇವೇಗೌಡರು ಇಲ್ಲಿನ ಕೆಲ ಜೆಡಿಎಸ್ ರೈತರನ್ನು ಎತ್ತಿಕಟ್ಟಿ ವಿಷಯವನ್ನು ಕಗ್ಗಂಟಾಗಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ದೇವೇಗೌಡರ ಕನಸು ನನಸಾಗುವುದಿಲ್ಲ. ಸರ್ಕಾರ ನಿಗದಿಪಡಿಸಿರುವ ಸ್ಥಳದಲ್ಲಿ ವಿಮಾನ ನಿಲ್ದಾಣ ಯೋಜನೆ ಆರಂಭವಾಗಲಿದೆ ಎಂದು ಹೇಳಿದರು.
ಸುಷ್ಮಾ ಸ್ವರಾಜ್ ಅವರ ಸೂಚನೆ ಮೇರೆಗೆ ಜೆ ಶಾಂತಿ ಅವರನ್ನು ಲೋಕಸಭೆ ಚುನಾವಣೆ ಕಣಕ್ಕಿಸಲು ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಭಾರಿಸಲಿದೆ ಎಂದು ಜನಾರ್ದನರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications