ದೇವೇಗೌಡರಿಗೆ ಬುದ್ಧಿ ಇಲ್ಲ, ಜನಾರ್ದನರೆಡ್ಡಿ

Janardhan Reddy
ಬಳ್ಳಾರಿ, ಮಾ. 6 : ಗಣಿ ಹಾಗೂ ಗಡಿ ವಿಷಯಗಳ ಕುರಿತು ಮಾತನಾಡುವುದಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಯಾವುದೇ ಹಕ್ಕಿಲ್ಲ. ಬುದ್ಧಿಜೀವಿಗಳೊಂದಿಗೆ ಚರ್ಚೆ ನಡೆಸುತ್ತಿರುವ ದೇವೇಗೌಡರಿಗೆ ಬುದ್ಧಿಯೇ ಇಲ್ಲ ಎಂದು ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಶುಕ್ರವಾರ ನಗರದ ಪಕ್ಷ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಅನಗತ್ಯವಾಗಿ ದೇವೇಗೌಡರು ಎಲ್ಲ ವಿಷಯದಲ್ಲಿ ತೆಲೆಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ದೇವೇಗೌಡರು ಇಲ್ಲಿನ ಕೆಲ ಜೆಡಿಎಸ್ ರೈತರನ್ನು ಎತ್ತಿಕಟ್ಟಿ ವಿಷಯವನ್ನು ಕಗ್ಗಂಟಾಗಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ದೇವೇಗೌಡರ ಕನಸು ನನಸಾಗುವುದಿಲ್ಲ. ಸರ್ಕಾರ ನಿಗದಿಪಡಿಸಿರುವ ಸ್ಥಳದಲ್ಲಿ ವಿಮಾನ ನಿಲ್ದಾಣ ಯೋಜನೆ ಆರಂಭವಾಗಲಿದೆ ಎಂದು ಹೇಳಿದರು.

ಸುಷ್ಮಾ ಸ್ವರಾಜ್ ಅವರ ಸೂಚನೆ ಮೇರೆಗೆ ಜೆ ಶಾಂತಿ ಅವರನ್ನು ಲೋಕಸಭೆ ಚುನಾವಣೆ ಕಣಕ್ಕಿಸಲು ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಭಾರಿಸಲಿದೆ ಎಂದು ಜನಾರ್ದನರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+