ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ

ಮೊದಲ ಹಂತ
ಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ (ಪ.ಜಾ.) ರಾಯಚೂರು (ಪ.ಪಂಗಡ), ಬೀದರ್, ಕೊಪ್ಪಳ, ಬಳ್ಳಾರಿ (ಪ.ಪಂಗಡ), ಉತ್ತರ ಕನ್ನಡ ಚಿತ್ರದುರ್ಗ (ಪ.ಜಾತಿ), ತುಮಕೂರು, ಬೆಂಗಳೂರು ಗ್ರಾಮಾಂತರ ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ(ಪ.ಜಾತಿ) ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈ 17 ಕ್ಷೇತ್ರಗಳ ಚುನಾವಣೆಯ ವೇಳಾಪಟ್ಟಿ ಹೀಗಿದೆ.
ಅಧಿಸೂಚನೆ ಹೊರಡಿಸುವ ದಿನಾಂಕ 28-3-2009
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 4-4-2009
ನಾಮಪತ್ರಗಳ ಪರಿಶೀಲನೆ ದಿನಾಂಕ 6-4-2009
ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 8-4-2009
ಮತದಾನದ ದಿನಾಂಕ 23-4-2009 ಗುರುವಾರ
ಮತ ಎಣಿಕೆ ದಿನಾಂಕ 16-5-2009
ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ದಿನಾಂಕ 28-5-2009
ಮೊದಲ ಹಂತದಲ್ಲಿ ನಾಮಪತ್ರಗಳನ್ನು 28-3-2009 ರಿಂದ 4-4-2009 ರವರೆಗೆ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನೆಗೋಷಿಯೇಬಲ್ ಇನ್ಸ್ಸ್ರುಮೆಂಟ್ ಕಾಯ್ದೆಯಡಿ ಘೋಷಿಸಲ್ಪಟ್ಟ ಸಾರ್ವತ್ರಿಕ ರಜಾ ದಿನ ಭಾನುವಾರ ದಿನಾಂಕ 29-3-2009 ನ್ನು ಹೊರಡುಪಡಿಸಿ ಚುನಾವಣಾಧಿಕಾರಿಯವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯವರಿಗೆ ಚುನಾವಣಾ ಅಧಿಕಾರಿಯವರ ಕಛೇರಿಯಲ್ಲಿ ಸಲ್ಲಿಸಬಹುದು.
ಎರಡನೇ ಹಂತ
ಎರಡನೇ ಹಂತದಲ್ಲಿ ಬಾಗಲಕೋಟೆ, ಹಾವೇರಿ, ಧಾರವಾಡ, ದಾವಣಗೆರೆ, ಶಿವಮೊಗ್ಗೆ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ (ಪ.ಜಾತಿ) ಒಟ್ಟು 11 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತದ ಚುನಾವಣಾ ವೇಳಾಪಟ್ಟಿ ಹೀಗಿದೆ.
ಅಧಿಸೂಚನೆ ಹೊರಡಿಸುವ ದಿನಾಂಕ 2-4-2009
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 9-4-2009
ನಾಮಪತ್ರಗಳ ಪರಿಶೀಲನೆ ದಿನಾಂಕ 11-4-2009
ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 13-4-2009
ಮತದಾನದ ದಿನಾಂಕ 30-4-2009
ಮತ ಎಣಿಕೆ ದಿನಾಂಕ 16-5-2009
ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ದಿನಾಂಕ 28-5-2009
ಎರಡನೇ ಹಂತದಲ್ಲಿ ನಾಮಪತ್ರಗಳನ್ನು 2-4-2009 ರಿಂದ 9-4-2009 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ 5-4-2009, 7-4-2009 ನ್ನು ಹೊರತುಪಡಿಸಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಉಮೇದುವಾರರು ಅಥವಾ ಅವರ ಸೂಚಕರಲ್ಲಿ ಯಾರಾದರೊಬ್ಬರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯವರಿಗೆ ಖುದ್ದಾಗಿ ಚುನಾವಣಾಧಿಕಾರಿಯವರ ಕಛೇರಿಯಲ್ಲಿ ಸಲ್ಲಿಸಬಹುದು.
ಈ ಸಾರ್ವತ್ರಿಕ ಚುನಾವಣೆಗಳಲ್ಲಿ ದಿನಾಂಕ 1-1-2009 ರಂದು ಅರ್ಹತಾ ದಿನಾಂಕವೆಂದು ಪರಿಗಣಿಸಿ ತಯಾರಿಸಲಾದ ಫೋಟೋ ಮತದಾರರ ಪಟ್ಟಿಗಳನ್ನು ಬಳಸಲಾಗುವುದು. ಈ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರಗಳನ್ನು ಬಳಸಲಾಗುವುದು. ಮಾದರಿ ನೀತಿ ಸಂಹಿತೆಯು ಮಾರ್ಚ್ 2 ರಿಂದಲೇ ಜಾರಿಗೆ ಬಂದಿರುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ, ವಿದ್ಯಾಶಂಕರ್
ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications