ಚುನಾವಣೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೃಷ್ಣ

SM Krishna
ಬೆಂಗಳೂರು, ಮಾ. 6 : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರು ಗುರುವಾರ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಿಧಾನವಾಗಿ ಪ್ರದಕ್ಷಿಣೆ ಹಾಕುವ ಮೂಲಕ ಮತದಾರ ಮನ ಗೆಲ್ಲುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಬಿಟಿಎಂ ಲೇಔಟ್ ನ ತಾವರೆಕೆರೆಯ ಶ್ರೀರಾಮ ದೇವಸ್ಥಾನದ ಉದ್ಘಾಟನೆ ನಂತರ ಶಾಸಕ ರಾಮಲಿಂಗಾರೆಡ್ಡಿಯವರ ಮನೆಗೆ ತೆರಳಿ ಅಲ್ಲಿಂದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆ ನಡೆಸಿ, ಕ್ಷೇತ್ರ ಕುರಿತು ಮಾಹಿತಿ ಸಂಗ್ರಹಿಸಿದರು. ಹೈಕಮಾಂಡ್ ಒತ್ತಡಕ್ಕೆ ಮಣಿದಿರುವ ಅವರು, ಸ್ಪರ್ಧೆಗೆ ಒಲ್ಲದ ಮನಸ್ಸಿನಿಂದ ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಹೀಗಾಗಿ ಶುಕ್ರವಾರವೂ ಬಸವನಗುಡಿ ಮತ್ತು ಬೊಮ್ಮನಹಳ್ಳಿ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರಿಗೆ ಜತೆ ಸಮಾಲೋಚನೆ ನಡೆಸಲಿದ್ದಾರೆ. ಅದಾದ ಎರಡು ದಿನ ಬಿಟ್ಟು ಪ್ರತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಮನೆಗೆ ಭೇಟಿ ನೀಡಲು ಕೃಷ್ಣ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಭೇಟಿ ನೀಡಿದ ಕಾರಣ ನೀಡಿದ ಕೃಷ್ಣ, ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕೇ, ಬೇಡವೇ ಎಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆಗೆ ಜೈಹೋ ಹಾಡಿನ ಹಕ್ಕು ಕೈಗೆ
ಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಬೇಸರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+