ಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು

ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆಯ ಮೂಲಕ ಆಂಧ್ರ ಮುಖ್ಯಮಂತ್ರಿ ಪುತ್ರ ಮತ್ತು ಜನಾರ್ದನ ರೆಡ್ಡಿ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ದೇವೇಗೌಡರು ದೂರಿದ್ದಾರೆ.
ರಾಜ್ಯದ 36 ಕಿ.ಮೀ ಉದ್ದದ ಗಡಿಯನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ಅಕ್ರಮ ಗಣಿಗಾರಿಕೆಯನ್ನು ನಡೆಸಲಾಗುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಈ ಗಡಿ ಕಬಳಿಕೆಯನ್ನು ನಿಲ್ಲಿಸಬೇಕು ಎಂದು ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ತಿಳಿಸಿದರು. ಮುಂಬರುವ ಚುನಾವಣೆಯಲ್ಲಿ ಈ ವಿಚಾರವನ್ನು ಜನತೆಯ ಮುಂದಿಡಲಾಗುತ್ತದೆ ಎಂದು ದೇವೇಗೌಡರು ಸುದ್ದಿಗಾರರಿಗೆ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications