ಅಧಿಕಾರಿ,ಸಿಬ್ಬಂದಿಯ ವರ್ಗಾವಣೆ ನಿಷೇಧ
ಮಡಿಕೇರಿ. ಮಾ.7: ಈಗಾಗಲೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ಚುನಾವಣೆ ಪೂರ್ಣವಾಗುವವರೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳ ವರ್ಗಾವಣೆಯನ್ನು ನಿಷೇಧಿಸಲಾಗಿದೆ.
ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಈಗಾಗಲೇ ಪ್ರಕಟಿಸಿದೆ. ಇದರಿಂದಾಗಿ ಚುನಾವಣಾ ನೀತಿ ಸಂಹಿತೆಯು ಜಾರಿಗೆ ಬಂದಿದ್ದು ಅಧಿಕಾರಿ ಮತ್ತು ಸಿಬ್ಬಂದಿಗಳ ಸೇವೆಯನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಬೇಕಾಗಿರುವುದರಿಂದ ಲೋಕಸಭಾ ಚುನಾವಣೆ ಪ್ರಕ್ರಿಯೆ ಪೂರ್ಣವಾಗುವವರೆಗೆ ಅಧಿಕಾರಿ ಮತ್ತು ಸಿಬ್ಬಂದಿಗಳ ವರ್ಗಾವಣೆಯನ್ನು ನಿಷೇಧಿಸಲಾಗಿದೆ.
ಚುನಾವಣಾ ಆಯೋಗದಿಂದ ಅನುಮಿತಿಸಿದ ವರ್ಗಾವಣೆಗಳನ್ನು ಹೊರತುಪಡಿಸಿ, ಉಳಿದ ವರ್ಗಾವಣೆಗಳ ಆದೇಶ ರೀತ್ಯ ಅಧಿಕಾರಿ,ನೌಕರರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವ ಮುನ್ನ ಜಿಲ್ಲಾಧಿಕಾರಿ ಕಚೇರಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಲು ಮೈಸೂರು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications