ಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ

ನಿಗದಿತ 50 ಓವರ್ ಗಳಲ್ಲಿ ಭಾರತದ ದಾಂಡಿಗರು ನಾಮೇಲೂ, ತಾಮೇಲೂ ಎಂದು ಕಿವಿ ಬೌಲರ್ ಗಳ ಕಿವಿ ಹಿಂಡುತ್ತಿರುವುದನ್ನು ನೋಡುತ್ತಿರುವುದೇ ಒಂದು ಮಹಾದಾನಂದ ಗಳಿಗೆಯಾಗಿತ್ತು. ಅನುಭವಿ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಸೊಗಸಾದ 163 ರನ್ ಗಳ ಭರ್ಜರಿ ಶತಕದಿಂದ ಧೋನಿ ತಂಡ ಬೃಹತ್ ಎನ್ನಲಾದ 393 ರನ್ ಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಯಿತು.
ಯುವರಾಜ್ ಸಿಂಗ್ 87, ನಾಯಕ ಮಹೇಂದ್ರ ಸಿಂಗ್ ಧೋನಿ 63, ಸುರೇಶ್ ರೈನಾ ಕಿವಿ ಬೌಲರ್ ಗಳ ಪ್ರತಿ ಬೌಲ್ ಗಳನ್ನು ಮನಬಂದಂತೆ ದಂಡಿಸಿ ಮೈದಾನದ ಮೂಲೆಮೂಲೆಗೂ ಚಂಡನ್ನು ಅಟ್ಟುವ ಮೂಲಕ ಭಾನುವಾರದಂದು ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡಿದರು.
ಭಾರತದ ಬೃಹತ್ ಮೊತ್ತ ಬೆನ್ನಟ್ಟಿದೆ ಕಿವೀಸ್ ಬ್ಯಾಟುಗಾರರು ಆರಂಭದಲ್ಲಿ ಭಾರಿ ಪ್ರತಿರೋಧ ತೋರಿದರಾದರೂ ಭಾರತೀಯ ಬೌಲರ್ ಗಳ ಕರಾರುವಾಕ್ಕಾದ ದಾಳಿಗೆ ಗೆಲುವಿನ ಕನಸು ಕನಸಾಗಿಯೇ ಉಳಿಯಿತು. ಆರಂಭಿಕರಾದ ರೈಡರ್ 105 ಹಾಗೂ ನಾಯಕ ಬ್ರೆಂಡನ್ ಮೆಕಲಮ್ ಅವರ 71 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿಕೊಟ್ಟರಾದರೂ ಉಳಿದ ಆಟಗಾರರ ಕ್ರಿಸ್ ಬಳಿ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. 45.1 ಒವರ್ ಗಳಲ್ಲಿ ನ್ಯೂಜಿಲ್ಯಾಂಡ್ ಆಲ್ ಔಟಾಗಿ 58 ರನ್ ಗಳ ಸೋಲನ್ನು ಒಪ್ಪಿಕೊಂಡಿತು. ಸಚಿನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಬಾಜನರಾದರು.
ಭಾರತ, 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 392 ರನ್.
ನ್ಯೂಜಿಲ್ಯಾಂಡ್ 45.1 ಓವರ್ ಗಳಲ್ಲಿ 334 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲು.
ನಾಲ್ಕನೇ ಪಂದ್ಯ ಹ್ಯಾಮಿಲ್ಟನ್ ನಲ್ಲಿ ಮಾರ್ಚ್ 11 ರಂದು ನಡೆಯಲಿದೆ.
(ದಟ್ಸ್ ಕನ್ನಡ ವಾರ್ತೆ)
ಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications