ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜಕೀಯಕ್ಕೆ ನಿರ್ದೇಶಕ ಪ್ರೇಮ್ ಪ್ರವೇಶ ಸಾಧ್ಯತೆ
ನಿರ್ದೇಶಕ ಪ್ರೇಮ್ ಗೆ ಇರುವ ಚರಿಷ್ಮಾವನ್ನು ಬಳಸಿಕೊಳ್ಳಲು ತೆರೆಮರೆಯಲ್ಲಿ ಬಿಜೆಪಿ ಭಾರಿ ಸಾಹಸ ನಡೆಸಿದೆ. ಹ್ಯಾಟ್ರಿಕ್ ನಿರ್ದೇಶಕ ಎಂಬ ಖ್ಯಾತಿ ಹೊಂದಿರುವ ಪ್ರೇಮ್ ಅವರು ಮಂಡ್ಯದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದನ್ನೆಲ್ಲಾ ಗಮನಿಸಿರುವ ಬಿಜೆಪಿ ಮುಖಂಡರು ಪ್ರೇಮ್ ಗೆ ಗಾಳಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ನಿರ್ದೇಶಕ ಪ್ರೇಮ್, ಬಿಜೆಪಿ ಮುಖಂಡರಿಂದ ಭಾರಿ ಒತ್ತಡ ಹೆಚ್ಚಿದೆ. ಇದರ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೇ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನನ್ನು ಸಂಪರ್ಕಿಸಿದ್ದರು. ಆದರೆ, ನಾನು ಚಿತ್ರರಂಗದಲ್ಲಿ ಬಿಜಿಯಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಥೇಟ್ ಸಿನಿಮಾ ವರಸೆಯಲ್ಲಿ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, March 9, 2009, 14:06 [IST]