ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಕೀಯಕ್ಕೆ ನಿರ್ದೇಶಕ ಪ್ರೇಮ್ ಪ್ರವೇಶ ಸಾಧ್ಯತೆ

By Staff
|
Google Oneindia Kannada News

Director Prem
ಬೆಂಗಳೂರು, ಮಾ. 9 : ಚಿತ್ರನಟರು ಸಕ್ರಿಯ ರಾಜಕೀಯಕ್ಕೆ ಧುಮುಕುತ್ತಿರುವುದು ಹೊಸದೇನಲ್ಲ. ಅಂಬರೀಷ್ , ಮುಖ್ಯಮಂತ್ರಿ ಚಂದ್ರು ಸ್ವಲ್ಪ ಗಟ್ಟಿಯಾಗಿ ನಿಂತಿದ್ದು ಬಿಟ್ಟರೆ, ಉಳಿದ ಯಾವ ಕಲಾವಿದರು ರಾಜಕೀಯದಲ್ಲಿ ತಳವೂರಲು ಸಾಧ್ಯವಾಗಿಲ್ಲ. ಈ ನಡುವೆ ನಟ ಹಾಗೂ ನಿರ್ದೇಶಕ ಪ್ರೇಮ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವ ಸುದ್ದಿ ಕಳೆದೆರಡು ದಿನಗಳಿಂದ ದಟ್ಟವಾಗಿದೆ. ಬಿಜೆಪಿ ಸೇರ್ಪಡೆಯಾಗಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯುವ ಸಾಧ್ಯತೆಗಳಿವೆ.

ನಿರ್ದೇಶಕ ಪ್ರೇಮ್ ಗೆ ಇರುವ ಚರಿಷ್ಮಾವನ್ನು ಬಳಸಿಕೊಳ್ಳಲು ತೆರೆಮರೆಯಲ್ಲಿ ಬಿಜೆಪಿ ಭಾರಿ ಸಾಹಸ ನಡೆಸಿದೆ. ಹ್ಯಾಟ್ರಿಕ್ ನಿರ್ದೇಶಕ ಎಂಬ ಖ್ಯಾತಿ ಹೊಂದಿರುವ ಪ್ರೇಮ್ ಅವರು ಮಂಡ್ಯದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದನ್ನೆಲ್ಲಾ ಗಮನಿಸಿರುವ ಬಿಜೆಪಿ ಮುಖಂಡರು ಪ್ರೇಮ್ ಗೆ ಗಾಳಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಿರ್ದೇಶಕ ಪ್ರೇಮ್, ಬಿಜೆಪಿ ಮುಖಂಡರಿಂದ ಭಾರಿ ಒತ್ತಡ ಹೆಚ್ಚಿದೆ. ಇದರ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೇ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನನ್ನು ಸಂಪರ್ಕಿಸಿದ್ದರು. ಆದರೆ, ನಾನು ಚಿತ್ರರಂಗದಲ್ಲಿ ಬಿಜಿಯಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಥೇಟ್ ಸಿನಿಮಾ ವರಸೆಯಲ್ಲಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X