ಶ್ರೀಲಂಕಾ ಆತ್ಮಾಹುತಿ ದಾಳಿ, 15 ಸಾವು
ಕೊಲಂಬೊ, ಮಾ. 10 : ಮಸೀದಿಯೊಂದರ ಬಳಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ 15 ಮಂದಿ ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಶ್ರೀಲಂಕಾ ರಾಜಧಾನಿ ಬಳಿ ಇರುವ ಮಟಾರ ಜಿಲ್ಲೆಯ ಅಕುರೆಸ್ಸಾ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಶ್ರೀಲಂಕಾ ಸರ್ಕಾರದ ಕ್ಯಾಬಿನೆಟ್ ಸಚಿವ ಮಹಿಂದಾ ವಿಜೇಸೇಖರ್ ಗಂಭೀರವಾಗಿ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ಮೊಹಮ್ಮದ್ ಪೈಗಂಬರರ ಜನ್ಮದಿನ ಈದ್ ಮಿಲಾದ್ ದಿನದಂದು ಮಸೀದಿ ಬಳಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿರುವುದು ವಿಷಾದಕರ ಸಂಗತಿ ಎಂದು ಶ್ರೀಲಂಕಾ ಮಿಲಿಟರಿ ವಕ್ತಾರ ಬ್ರಿಗೇಡಿಯರ್ ಉದಯ್ ನಯನಕ್ಕಾರ್ ತಿಳಿಸಿದ್ದಾರೆ. ಎಲ್ ಟಿಟಿಇ ಬಂಡುಕೋರರು ಈ ಕೃತ್ಯ ಎಸಗಿರಬಹುದು ಎಂದು ಮೂಲಗಳು ತಿಳಿಸಿವೆ. ಗಾಯಗೊಂಡಿರುವ ಸಚಿವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications