ದಾವಣಗೆರೆ, ಮಾ. 22 ರಂದು ಕಾಂಗ್ರೆಸ್ ಸಮಾವೇಶ
ಬೆಂಗಳೂರು, ಮಾ. 11 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜಾಗುತ್ತಿದೆ. ನಾಯಕರ ಒಗ್ಗಟ್ಟಿನ ಪ್ರದರ್ಶನಕ್ಕೂ ವೇದಿಕೆ ಸಿದ್ಧವಾಗುತ್ತಿದೆ. ದಾವಣಗೆರೆಯಲ್ಲಿ ಮಾರ್ಚ್ 22 ರಂದು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸುವ ಮೂಲಕ ಚುನಾವಣೆಗೆ ರಣಕಹಳೆ ಮೊಳಗಿಸಲು ಪ್ರದೇಶ ಕಾಂಗ್ರೆಸ್ ನಿರ್ಧರಿಸಿದೆ.
ಕೇಂದ್ರದಲ್ಲಿನ ಯುಪಿಎ ಸರ್ಕಾರದ ಸಾಧನೆಗಳ ಪರಿಚಯ ಹಾಗೂ ರಾಜ್ಯದಲ್ಲಿಯ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಮಾವೇಶ ಆಯೋಜಿಸವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸವಾವೇಶದ ಮೂಲಕ ಚುನಾವಣಾ ಪ್ರಚಾರ ಕಾರ್ಯಕ್ಕೂ ಚಾಲನೆ ದೊರೆಯಲಿದೆ. ರಾಜ್ಯದ ಮೂಲೆಮೂಲೆಯಿಂದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಬರಲಿದ್ದಾರೆ ಎಂದು ಅವರು ಹೇಳಿದರು. ಮಾರ್ಚ್ 22 ರಂದು ಬೆಳಗ್ಗೆ ಆರಂಭವಾಗಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಗುಲಾಮ್ ನಬಿ ಅಜಾದ್ ಆಗಮಿಸಲಿದ್ದಾರೆ ಎಂದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications