ದೇವಸ್ಥಾನ ತೆರವು, ಸಾರ್ವಜನಿಕರ ಆಕ್ರೋಶ

ಬೆಂಗಳೂರು, ಮಾ. 11 : ಬಿಬಿಎಂಪಿ ಎನ್ನುವ ಕಾರಣಕ್ಕೆ ದೇವಸ್ಥಾನವನ್ನು ತೆರವುಗೊಳಿಸಿರುವ ಕ್ರಮ ವಿರೋಧಿಸಿ ಸಾರ್ವಜನಿಕರು ಆಕ್ರೋಶಪಡಿಸಿದ ಹಿನ್ನೆಲೆಯಲ್ಲಿ ಜನರ ಮೇಲೆ ಲಘು ಲಾಠಿ ಪ್ರಹಾರ ಮಾಡಿರುವ ಘಟನೆ ನಗರದ 95 ವಾರ್ಡಿನ ಶಾಂಪುರ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದ ಜಾಗ ಎಂದು ಬಿಬಿಎಂಪಿ ಅಧಿಕಾರಿಗಳು ಇಂದು ಏಕಾಏಕಿ ಗರ್ಭ ಗುಡಿಯಂತಿದ್ದ ಼ಚಿಕ್ಕ ದೇವಸ್ಥಾನವನ್ನು ತೆರವು ಗೊಳಿಸಿದ್ದಾರೆ. ಇದರಿಂದ ಕೋಪಗೊಂಡ ಸಾರ್ವಜನಿಕರ ಸ್ಥಳೀಯ ಬಿಬಿಎಂಪಿ ಕಚೇರಿಹೆ ನುಗ್ಗಿ ಗಲಾಟೆ ಆರಂಭಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಾರ್ವಜನಿಕರ ಮನವೊಲಿಕೆಗೆ ಯತ್ನ ನಡೆಸಿದರು. ಯಾವುದನ್ನೂ ಲೆಕ್ಕಿಸಿದ ಜನರು ಬಿಬಿಎಂಪಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸಗೊಳಿಸಿದರು. ಆಗ ಗುಂಪು ಚೆದುರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡಿ ಗುಂಪು ಚೆದುರಿಸಿದ್ದಾರೆ.

ಇದರಿಂದ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಪರಿಸ್ಥಿತಿ ಬೂದಿಮುಚ್ಚಿದಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಗರ್ಭಗುಡಿಯಂತಿರುವ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲು ಸ್ಥಳೀಯ ಕಾರ್ಯಕ್ರಮ ಹಾಕಿಕೊಂಡಿದ್ದರು. ಆದರೆ, ಬಿಬಿಎಂಪಿ ಅಧಿಕಾರಿಗಳು ದೇವಸ್ಥಾನ ತೆರವುಗೊಳಿಸಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ತೆರವುಗೊಂಡ ದೇಗುಲವನ್ನು ರೇಣುಕಾ ಯಲ್ಲಮ್ಮ ದೇವಸ್ಥಾನ ಎಂದು ಹೇಳಲಾಗಿದ್ದು, ದೇವಸ್ಥಾನ ತೆರವುಗೊಳಿಸಿದ ನಂತರ ವಿಗ್ರಹಗಳನ್ನು ಬಿಬಿಎಂಪಿ ಕಚೇರಿಯಲ್ಲಿ ಇರಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+