ಮತದಾರರೇ ನಿಮ್ಮ ಹೆಸರು ಮತಪಟ್ಟಿಯಲ್ಲಿದೆಯೇ?
ಬೆಂಗಳೂರು, ಮಾರ್ಚ್.12: ಮತದಾರರು ತಮ್ಮ ಹೆಸರು ಮತಪಟ್ಟಿಯಲ್ಲಿ ಇದ್ದೇ ಇರುತ್ತದೆಂಬ ಭಾವನೆಯಿಂದ ಇರದೆ ಈ ಬಗ್ಗೆ ಮೊದಲೇ ಖಚಿತಪಡಿಸಿಕೊಳ್ಳಬೇಕು, ಯಾವ ಮತದಾನ ಕೇಂದ್ರದಲ್ಲಿದೆ, ಕ್ರಮಸಂಖ್ಯೆಯೇನು ಮುಂತಾದ ವಿವರಗಳನ್ನು ಖಚಿತಪಡಿಸಿಕೊಂಡಲ್ಲಿ ಈಗಲೂ ಸಹ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಸೇರ್ಪಡೆಗೆ ಅವಕಾಶವಿದೆ.
ನಮ್ಮ ನಗರಗಳಲ್ಲಿನ 50 ಮತದಾರರ ಸೇವಾ ಕೇಂದ್ರಗಳ ಮುಖಾಂತರ ಈವರೆಗೆ ಸುಮಾರು 3.4 ಲಕ್ಷ ಮತದಾರರು ಸಹಾಯ ಪಡೆದಿದ್ದಾರೆ . ಅವರಲ್ಲಿ 1.9 ಲಕ್ಷ ಜನರಿಗೆ ಎಪಿಕ್ ಕಾರ್ಡ್ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ತಿಳಿಸಿದರು. ಅವರ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ನಗರ ಸೇವಾ ಕೇಂದ್ರಗಳಲ್ಲಿ ಹಿಂದುಳಿದ ವರ್ಗಗಳು, ಕೊಳಚೆ ನಿವಾಸಿಗಳಿಗೆ (ಹೆಚ್ಚಿನ ದಾಖಲಾತಿಗಳ ಲಭ್ಯತೆ ಇಲ್ಲದ ಕಾರಣ) ಹೆಚ್ಚಿನ ಆದ್ಯತೆ ಮೇಲೆ ನೆರವು ನೀಡಲಾಗುತ್ತಿದೆಯೆಂದು ಅವರು ತಿಳಿಸಿದರು.
ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಮದ್ಯದ ಸಾಗಣೆ, ಮಾರಾಟ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಅಕ್ರಮ ಮದ್ಯಸಾಗಣೆ ಅಥವಾ ಮಾರಾಟ ಪ್ರತಿಕ್ರಿಯೆಯು ಯಾವ ಜಿಲ್ಲೆಯಿಂದ ಆರಂಭಗೊಂಡಿವೆ, ಯಾವುದು ಮೂಲ ಕಾರಣಕರ್ತ ಜಿಲ್ಲೆಯಾಗಿದೆಯೋ ಅಲ್ಲಿನ ಅಬಕಾರಿ ಜಿಲ್ಲಾಧಿಕಾರಿಯನ್ನು ಈ ಬಗ್ಗೆ ಜವಾಬ್ದಾರನ್ನಾಗಿ ಮಾಡಲು ನಿರ್ಣಯಿಸಲಾಗಿದೆ. ಸಂಚಾರಿ ದಳ, ಸ್ಥಾವರಗಳ ಮೂಲಕ ದಿನಂಪ್ರತಿ ಈ ಸಂಬಂಧ ವಿವರಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಪಡೆಯುವ ವ್ಯವಸ್ಥೆ ಮಾಡಲಾಗಿದೆಯೆಂದರು.
ವಾಣಿಜ್ಯ ತೆರಿಗೆ ಇಲಾಖೆ, ಬ್ಯಾಂಕಿಂಗ್ ಸಂಸ್ಥೆಗಳು ಮತ್ತಿತರ ಹಣಕಾಸು ಸಂಸ್ಥೆಗಳೊಂದಿಗೆ ಮಾರ್ಚ್ 12ರಂದು ಸಭೆ ನಡೆಸಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಹಣಕಾಸು ಹಂಚಿಕೆ ಕುರಿತಂತೆ ಸಾಕಷ್ಟು ದೂರುಗಳು ಬಂದಿದ್ದ ಕಾರಣ ಈ ಮುನ್ನಚ್ಚರಿಕೆ ತೆಗೆದುಕೊಳ್ಳಲಾಗುತ್ತದೆಯೆಂದರು. ಆ ಸಂಸ್ಥೆಗಳಲ್ಲಿ ಇತರ ವೇಳೆಗಿಂತ ಈ ಅವಧಿಯಲ್ಲಿ ಹೆಚ್ಚಿನ ಹಣಕಾಸು ವ್ಯವಹಾರ ಜರುಗಿದ ವಿವರ ಪಡೆದು ಅದನ್ನು ಆಧರಿಸಿ ನಿರ್ಧಾರಕ್ಕೆ ಬರಲಾಗುತ್ತದೆ. ಪೊಲೀಸ್ ಇಲಾಖೆ ಡಿ.ಜಿ. ಇನ್ಸ್ಪೆಕ್ಟರ್ ಜನರಲ್ ರೊಂದಿಗೆ ಕಾನೂನು ಸುವ್ಯವ್ಯಸ್ಥೆ ಕುರಿತಂತೆ ಚರ್ಚಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ 15ರಿಂದ 16 ಹುದ್ದೆಗಳು ಖಾಲಿಯಿದ್ದು ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸಹ ಚರ್ಚಿಸಲಾಗಿದೆ ಎಂದು ಸಹ ವಿದ್ಯಾಶಂಕರ್ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications