ಮತದಾರರೇ ನಿಮ್ಮ ಹೆಸರು ಮತಪಟ್ಟಿಯಲ್ಲಿದೆಯೇ?
ಬೆಂಗಳೂರು, ಮಾರ್ಚ್.12: ಮತದಾರರು ತಮ್ಮ ಹೆಸರು ಮತಪಟ್ಟಿಯಲ್ಲಿ ಇದ್ದೇ ಇರುತ್ತದೆಂಬ ಭಾವನೆಯಿಂದ ಇರದೆ ಈ ಬಗ್ಗೆ ಮೊದಲೇ ಖಚಿತಪಡಿಸಿಕೊಳ್ಳಬೇಕು, ಯಾವ ಮತದಾನ ಕೇಂದ್ರದಲ್ಲಿದೆ, ಕ್ರಮಸಂಖ್ಯೆಯೇನು ಮುಂತಾದ ವಿವರಗಳನ್ನು ಖಚಿತಪಡಿಸಿಕೊಂಡಲ್ಲಿ ಈಗಲೂ ಸಹ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಸೇರ್ಪಡೆಗೆ ಅವಕಾಶವಿದೆ.
ನಮ್ಮ ನಗರಗಳಲ್ಲಿನ 50 ಮತದಾರರ ಸೇವಾ ಕೇಂದ್ರಗಳ ಮುಖಾಂತರ ಈವರೆಗೆ ಸುಮಾರು 3.4 ಲಕ್ಷ ಮತದಾರರು ಸಹಾಯ ಪಡೆದಿದ್ದಾರೆ . ಅವರಲ್ಲಿ 1.9 ಲಕ್ಷ ಜನರಿಗೆ ಎಪಿಕ್ ಕಾರ್ಡ್ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ತಿಳಿಸಿದರು. ಅವರ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ನಗರ ಸೇವಾ ಕೇಂದ್ರಗಳಲ್ಲಿ ಹಿಂದುಳಿದ ವರ್ಗಗಳು, ಕೊಳಚೆ ನಿವಾಸಿಗಳಿಗೆ (ಹೆಚ್ಚಿನ ದಾಖಲಾತಿಗಳ ಲಭ್ಯತೆ ಇಲ್ಲದ ಕಾರಣ) ಹೆಚ್ಚಿನ ಆದ್ಯತೆ ಮೇಲೆ ನೆರವು ನೀಡಲಾಗುತ್ತಿದೆಯೆಂದು ಅವರು ತಿಳಿಸಿದರು.
ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಮದ್ಯದ ಸಾಗಣೆ, ಮಾರಾಟ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಅಕ್ರಮ ಮದ್ಯಸಾಗಣೆ ಅಥವಾ ಮಾರಾಟ ಪ್ರತಿಕ್ರಿಯೆಯು ಯಾವ ಜಿಲ್ಲೆಯಿಂದ ಆರಂಭಗೊಂಡಿವೆ, ಯಾವುದು ಮೂಲ ಕಾರಣಕರ್ತ ಜಿಲ್ಲೆಯಾಗಿದೆಯೋ ಅಲ್ಲಿನ ಅಬಕಾರಿ ಜಿಲ್ಲಾಧಿಕಾರಿಯನ್ನು ಈ ಬಗ್ಗೆ ಜವಾಬ್ದಾರನ್ನಾಗಿ ಮಾಡಲು ನಿರ್ಣಯಿಸಲಾಗಿದೆ. ಸಂಚಾರಿ ದಳ, ಸ್ಥಾವರಗಳ ಮೂಲಕ ದಿನಂಪ್ರತಿ ಈ ಸಂಬಂಧ ವಿವರಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಪಡೆಯುವ ವ್ಯವಸ್ಥೆ ಮಾಡಲಾಗಿದೆಯೆಂದರು.
ವಾಣಿಜ್ಯ ತೆರಿಗೆ ಇಲಾಖೆ, ಬ್ಯಾಂಕಿಂಗ್ ಸಂಸ್ಥೆಗಳು ಮತ್ತಿತರ ಹಣಕಾಸು ಸಂಸ್ಥೆಗಳೊಂದಿಗೆ ಮಾರ್ಚ್ 12ರಂದು ಸಭೆ ನಡೆಸಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಹಣಕಾಸು ಹಂಚಿಕೆ ಕುರಿತಂತೆ ಸಾಕಷ್ಟು ದೂರುಗಳು ಬಂದಿದ್ದ ಕಾರಣ ಈ ಮುನ್ನಚ್ಚರಿಕೆ ತೆಗೆದುಕೊಳ್ಳಲಾಗುತ್ತದೆಯೆಂದರು. ಆ ಸಂಸ್ಥೆಗಳಲ್ಲಿ ಇತರ ವೇಳೆಗಿಂತ ಈ ಅವಧಿಯಲ್ಲಿ ಹೆಚ್ಚಿನ ಹಣಕಾಸು ವ್ಯವಹಾರ ಜರುಗಿದ ವಿವರ ಪಡೆದು ಅದನ್ನು ಆಧರಿಸಿ ನಿರ್ಧಾರಕ್ಕೆ ಬರಲಾಗುತ್ತದೆ. ಪೊಲೀಸ್ ಇಲಾಖೆ ಡಿ.ಜಿ. ಇನ್ಸ್ಪೆಕ್ಟರ್ ಜನರಲ್ ರೊಂದಿಗೆ ಕಾನೂನು ಸುವ್ಯವ್ಯಸ್ಥೆ ಕುರಿತಂತೆ ಚರ್ಚಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ 15ರಿಂದ 16 ಹುದ್ದೆಗಳು ಖಾಲಿಯಿದ್ದು ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸಹ ಚರ್ಚಿಸಲಾಗಿದೆ ಎಂದು ಸಹ ವಿದ್ಯಾಶಂಕರ್ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications