ನನಗೆ ಜೀವಭಯವಿದೆ, ನವಾಜ್ ಷರೀಫ್
ಇಸ್ಲಾಮಾಬಾದ್, ಮಾ.12 : ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆಗೆ ಇಳಿದಿರುವ ನನಗೆ ಜೀವಭಯವಿದೆ. ನನ್ನನ್ನು ಕೊಲ್ಲಲು ಪಾಕಿಸ್ತಾನದ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಸುಪಾರಿ ನೀಡಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಹಾಗೂ ಪಿಎಂಎಲ್ (ಎನ್) ಮುಖಂಡ ನವಾಜ್ ಷರೀಫ್ ಗಂಭೀರ ಆರೋಪ ಮಾಡಿದ್ದಾರೆ.
ಬ್ರಿಟನ್ ಪತ್ರಿಕೆ ಗಾರ್ಡಿಯನ್ ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ಜರ್ದಾರಿ ಸೂಚನೆ ಮೇರೆಗೆ ಕೆಲ ಅಧಿಕಾರಿಗಳು ನನ್ನನ್ನು ಮುಗಿಸಲು ಸಂಚು ರೂಪಿಸಿದ್ದಾರೆ ಎಂದರು. ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ. ದೇಶದಲ್ಲಿ ಅಶಾಂತಿ ಮನೆ ಮಾಡಿದೆ. ದೇಶದಲ್ಲಿ ಯಾವಾಗ ಬೇಕಾದರೂ ಅಲ್ಲೋಕಲ್ಲೋಲ ಸ್ಥಿತಿ ನಿರ್ಮಾಣವಾಗಬಹುದು ಎಂದು ಷರೀಫ್ ಕಳವಳ ವ್ಯಕ್ತಪಡಿಸಿದರು.
ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಸರ್ವಾಧಿಕಾರಿ ನೀತಿಯಿಂದ ಪಾಕಿಸ್ತಾನ ಈ ಮಟ್ಟಕ್ಕೆ ಇಳಿದಿದೆ. ಆಡಳಿತ ನಡೆಸುವಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ. ಆದ್ದರಿಂದ ಸರ್ಕಾರವನ್ನು ಶೀಘ್ರದಲ್ಲಿ ಕಿತ್ತೊಗೆಯಬೇಕು ಎಂದು ಆವರು ಆಗ್ರಹಿಸಿದರು. ಬುಧವಾರ ಷರೀಫ್ ಇಸ್ಲಾಮಾಬಾದ್ ನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಅವರು ಪಾಕ್ ಸರ್ಕಾರದ ಜನ್ಮ ಜಾಲಾಡಿದ್ದರು.
ಸದ್ಯ ಸೌಧಿಅರೇಬಿಯಾಕ್ಕೆ ತೆರಳಿರುವ ಜರ್ದಾರಿ ಅವರು ಪಾಕಿಸ್ತಾನಕ್ಕೆ ಮರಳುವುದು ಬೇಡ ಎಂದು ಷರೀಫ್ ಹೇಳಿದ್ದರು. ಸೇನಾ ಮುಖ್ಯಸ್ಥ ಅಶ್ಫಕ್ ಕಿಯಾನಿ ಕೂಡ ಅಧ್ಯಕ್ಷ ಜರ್ದಾರಿ ಭೇಟಿ ಮಾತುಕತೆ ನಡೆಸಿದ್ದರು. ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಪಾಕಿಸ್ತಾನದಲ್ಲಿ ಕ್ಷಿಪ್ರಕ್ರಾಂತಿ ಮೂಲಕ ಮತ್ತೆ ಸೇನಾಡಳಿತ ಜಾರಿಯಾಗುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications