ಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ

BSY, Ananth Kumar, Sadananda Gowda show unity
ಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು.

ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, ಸದಾನಂದಗೌಡ ಮತ್ತು ಅನಂತಕುಮಾರ್ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ತೆರಳಿ ಪಕ್ಷದ ಚುನಾವಣಾ ಕಚೇರಿ ಉದ್ಘಾಟಿಸುವ ಮೂಲಕ ಗಮನ ಸೆಳೆದರು. ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಿ ಪಕ್ಷದ ಚುನಾವಣಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದರು.

ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಉಳಿದ ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಯಲಿದೆ. ಮಾರ್ಚ್ 15 ಅಥವಾ 16ರಂದು ಅಭ್ಯರ್ಥಿಗಳ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲು ತೀರ್ಮಾನಿಸಲಾಯಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+