ಕನ್ನಡ ಶಾಸ್ತ್ರೀಯ ಭಾಷೆಯ ಬಗ್ಗೆ ಅಂತರ್ಜಾಲ
ಮೈಸೂರು, ಮಾ.14: ಭಾರತ ಸರ್ಕಾರದ ಮಾನವ ಸಂಪನ್ಮೂ ಸಚಿವಾಲಯದ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಉನ್ನತ ಶಿಕ್ಷಣ ಇಲಾಖೆಯು ಕನ್ನಡ ಶಾಸ್ತ್ರೀಯ ಭಾಷೆಯ ಬಗ್ಗೆ ಅಂತರ್ಜಾಲವನ್ನು ಅಭಿವೃದ್ಧಿಪಡಿಸಿದೆ. ಈ ಅಂತರ್ಜಾಲವನ್ನು ಮಾರ್ಚ್ 16ರಂದು ಬೆಳಿಗ್ಗೆ 11.30ಕ್ಕೆ ಸಂಸ್ಥೆಯ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡುತ್ತಿದೆ.
ಸಂಸ್ಥೆಯ ನಿರ್ದೇಶಕರಾದ ಪ್ರೊ.ಉದಯ ನಾರಾಯಣ ಸಿಂಹ ಅವರು ಸಲಹಾ ಸಮಿತಿಯ ಸದಸ್ಯರಾದ ಪ್ರೊ.ಚಿದಾನಂದಮೂರ್ತಿ, ಪ್ರೊ.ಎಂ.ಎಂ. ಕಲಬುರ್ಗಿ, ಪ್ರೊ.ಟಿ.ವಿ. ವೆಂಕಟಾಚಲಶಾಸ್ತ್ರಿ , ಪ್ರೊ.ಕೆ.ವಿ. ನಾರಾಯಣ, ಡಾ.ಎನ್.ಎಸ್. ತಾರಾನಾಥ್, ಲಿಂಗದೇವರು ಹಳೇಮನೆ ಮತ್ತು ಡಾ.ಭ. ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications