ಐಪಿಎಲ್ ಭದ್ರತೆಗೆ ಬಿದರಿ ನಕಾರ

ಬೆಂಗಳೂರು, ಮಾ. 15 : ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ನೀಡುವುದು ಅಸಾಧ್ಯ ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಹೇಳಿದರು.

ಏಪ್ರಿಲ್ 23 ಹಾಗೂ 30 ರಂದು ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತದೆ. ಜೊತೆಗೆ ಮೇ 16 ರಂದು ಮತ ಏಣಿಕೆಯಾಗುತ್ತದೆ. ಹೀಗಾಗಿ ಮೇ 3 ರವರೆಗೆ ಹಾಗೂ ಮೇ 15 ಮತ್ತು 18ರ ವರೆಗೆ ನಡೆಯುವ ಪಂದ್ಯಗಳಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ, ಪಂದ್ಯಗಳ ವೇಳಾಪಟ್ಟಿ ಬದಲಾಯಿಸಿದರೆ ಭದ್ರತೆ ನೀಡಲು ಬಿದರಿ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾರ್ಚ್ 13 ರಂದು ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ವಿ ಪಿ ಬಳಿಗಾರ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ ಕೆ ಎಂ ನಾಯಕ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಸುವ್ಯವಸ್ಥೆ) ಎ ಆರ್ ಇನ್ಫೆಂಟ್ ಜೊತೆಗೆ ಚರ್ಚೆ ನಡೆಸಿ ಪ್ರತ್ಯೇಕ ವೇಳಾಪಟ್ಟಿ ತಯಾರಿಸಿದ್ದಾರೆ.

ಮೇ 4, 7, 10, 11, 14, 19 ಹಾಗೂ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಸಿದರೆ ಸೂಕ್ತ ಭದ್ರತೆ ನೀಡಲಾಗುವುದು. ಏಕದಿನ ಪಂದ್ಯಕ್ಕೆ ನೀಡುವಷ್ಟೇ ಭದ್ರತಾ ಮೊತ್ತವನ್ನು ಐಪಿಎಲ್ ಗೂ ನೀಡಬೇಕೆಂಬ ಷರತ್ತಿನೊಂದಿಗೆ ಹೊಸ ವೇಳಾಪಟ್ಟಿಯನ್ನು ರಾಯಲ್ ಚಾಲೆಂಜರ್ಸ್ ಸಂಸ್ಥೆ ಹಾಗೂ ಕ್ರಿಕೆಟ್ ಮಂಡಳಿಗೆ ಕಳುಹಿಸಿಕೊಡಲಾಗಿದೆ ಎಂದು ಶಂಕರಿ ಬಿದರಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+