ಮಾಯಾವತಿ ಬಿಜೆಪಿ ಬೆಂಬಲ ನೀಡುತ್ತಾರೆ :ಎಸ್ಪಿ
ಲಖನೌ, ಮಾ. 16 : ಬಿಜೆಪಿ ಮತ್ತು ಬಿಎಸ್ಪಿ ಒಂದೇ ನಾಣ್ಯದ ಎರಡು ಮುಖಗಳು, ನೀವು ಬಿಎಸ್ಪಿ ಗೆ ನೀಡುವ ಒಂದೊಂದು ಮತವು ಪರೋಕ್ಷವಾಗಿ ಬಿಜೆಪಿಗೆ ಸಹಾಯವಾಗುತ್ತದೆ. ಒಂದು ವೇಳೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಆಡ್ವಾಣಿ ಪ್ರಧಾನಿಯಾದರೆ, ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಉಪಪ್ರಧಾನಿ ಯಾಗಬಹುದು ಎಂದು ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತ ಅಮರ್ ಸಿಂಗ್, ಈ ಹಿಂದೆ ಮೂರೂ ಬಾರಿ ಬಿಎಸ್ಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ ಬಿಜೆಪಿ ಬೆಂಬಲ ನೀಡಿತ್ತು. ಗುಜರಾತ್ ಚುನಾವಣೆಯ ವೇಳೆ ಬಿಜೆಪಿಯ ನಾಯಕ ಲಾಲ್ ಜೀ ಟ೦ಡನ್ ಗೆ ಮಾಯಾ ರಾಖಿ ಕಟ್ಟಿದ್ದರು. ರಾಜಕೀಯವನ್ನು ವ್ಯಾಪಾರದ ದೃಷ್ಟಿಯಲ್ಲಿ ನೋಡುವ ಮಾಯಾವತಿ, ಈ ದೇಶದ ಪ್ರಧಾನಿಯಾಗುವ ಕನಸು ನನಸಾಗುವುದಿಲ್ಲ. ತೃತೀಯ ರಂಗದಲ್ಲಿರುವ ಹೆಚ್ಚಿನ ಎಲ್ಲಾ ಪಕ್ಷಗಳು ಈ ಹಿಂದೆ ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದವು ಎಂದು ಲೇವಡಿ ಮಾಡಿದರು.
ನಮ್ಮ ಮತ್ತು ಕಾಂಗ್ರೆಸ್ ನಡುವೆ ಸೀಟು ಹೊಂದಾಣಿಕೆಯಾಗದಿದ್ದರೂ ನಮ್ಮೆರಡು ಪಕ್ಷಗಳ ನಡುವೆ ಹೆಚ್ಚಿನ ಭಿನ್ನಾಬಿಪ್ರಾಯಗಳೇನೂ ಇಲ್ಲ ಎಂದು ಅಮರ್ ಸಿಂಗ್ ಹೇಳಿದರು. ಲಖನೌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲ್ ಜೀ ಟ೦ಡನ್ ಗೆ ವಾಜಪೇಯಿ ಬೆಂಬಲವಿದ್ದರೂ ನಮ್ಮ ಅಭ್ಯರ್ಥಿ ಸಂಜಯ್ ದತ್ತ್ ಗಾಂಧಿ ಗೆಲುವು ಖಚಿತ ಎಂದರು.
(ದಟ್ಸ್ ಕನ್ನಡ ವಾರ್ತೆ)
ಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications