ಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ

pramod mutalik
ಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, ಪ್ರತಿಭಟನೆಗಳು ಸಮಾಜದ ಶಾಂತಿ ಕದಡುವ ಕೆಲಸವಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪೊನ್ನರಾಜ್, ಮಂಗಳೂರು ಪಬ್ ದಾಳಿ ಹಾಗೂ ಪ್ರೇಮಿಗಳ ದಿನಾಚರಣೆ ಅವರು ತೆಗೆದುಕೊಂಡಿರುವ ಕ್ರಮ ಖಂಡನೀಯವಾಗಿದೆ. ಅಲ್ಲದೆ, ಉದ್ರೇಕಕಾರಿ ಭಾಷಣಗಳು, ಹೇಳಿಕೆಗಳು ಸಮಾಜದ ಶಾಂತಿ ನಾಶಕ್ಕೆ ಕಾರಣವಾಗಿವೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಮುತಾಲಿಕ್ ಅವರನ್ನು ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಮಂಗಳೂರು ಜಿಲ್ಲಾಡಳಿತ ತೆಗೆದುಕೊಂಡಿರುವ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಮೋದ್ ಮುತಾಲಿಕ್, ಈ ಆದೇಶವನ್ನು ಖಂಡಿಸುತ್ತೇನೆ ಎಂದಿದ್ದಾರೆ. ಇದು ಬಿಜೆಪಿ ಸರ್ಕಾರ ಕಪಟತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+