ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ
ಬೆಳಗಾವಿ,
ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸುವಂತೆ ಆಗ್ರಹಿಸಿದರು. ಸರ್ಕಾರ ಇದಕ್ಕೆ ಶೀಘ್ರವಾಗಿ ಸ್ಪಂದಿಸದಿದ್ದರೆ ಕರವೇ ಧ್ವಜ ಆರೋಹಣ ಮಾಡಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. id="toptextpromo">ಈ
ಕುರಿತು ಪ್ರತಿಕ್ರಿಯೆ ನೀಡಿರುವ ಕರವೇ ಮುಖಂಡ ಪ್ರವೀಣ್ ಶೆಟ್ಟಿ ಅವರು, ಕಳೆದ 50 ದಶಕಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ರಾಷ್ಟ್ರಧ್ವಜ ಹಾಗೂ ಎಂಇಎಸ್ ಧ್ವಜ ಮಾತ್ರ ಹಾರಾಡುತ್ತಿದೆ. ಆದರೆ, ಕರ್ನಾಟಕದ ಅವಿಭಾಜ್ಯ ಅಂಗವಾಗಿರುವ ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಇಲ್ಲದಿರುವುದು ನೋವಿನ ಸಂಗತಿ. ಸರ್ಕಾರಕ್ಕೆ ಕರವೇ ಗಡುವು ನೀಡುತ್ತಿದ್ದು, ಶೀಘ್ರವೇ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು. ಇಲ್ಲದಿದ್ದರೆ, ಕರವೇ ಎಂತಹ ತ್ಯಾಗಕ್ಕೂ ಸಿದ್ಧವಾಗಿ ಪಾಲಿಕೆ ಮೇಲೆ ಕನ್ನಡ ಬಾವುಟ ಹಾರಿಸುತ್ತದೆ ಎಂದು ಅವರು ಹೇಳಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications