ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಪು, ವಿಟ್ಲದಲ್ಲಿ ಕಲ್ಲು ತೂರಾಟ, ಉದ್ವಿಗ್ನ

By Staff
|
Google Oneindia Kannada News

ಕಾಪು, ಮಾ. 16 : ಹಿಂದೂ ಸಮಾಜೋತ್ಸವದ ಸಭೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ರಾಷ್ಟೀಯ ಹೆದ್ದಾರಿ 17 ಕಾಪು ಸಮೀಪ ಒಂದು ಕೋಮಿನ ಪ್ರಾರ್ಥನಾ ಮಂದಿರದ ಬಳಿ ಬಸ್ ಮೇಲೆ ರಾತ್ರಿ 8 ಘಂಟೆಯ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಹಾಗೆಯೇ ಮಂಗಳೂರು ಸಮೀಪದ ವಿಟ್ಲ ಬಳಿ ಕೂಡ ಸಮಾಜೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ವಾಹನಗಳ ಮೇಲೆ ಕಲ್ಲು ತುರಿದ ಘಟನೆ ವರದಿಯಾಗಿದೆ. ಗಲಭೆ ಪೀಡಿತ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಎಸ್ಪಿ ವಿಶ್ವನಾಥ್ ಪಂಡಿತ್ ಎರಡು ದಿನಗಳ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಘಟನೆಯಿಂದ ಮಂಗಳೂರು ಮತ್ತು ಉಡುಪಿ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ.

(ದಟ್ಸ್ ಕನ್ನಡ ವಾರ್ತೆ)
ಮುಂಡಗೋಡದಲ್ಲಿ ಕಲ್ಲು ತೂರಾಟ, ಉದ್ವಿಗ್ನ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X