ಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ ಅವರನ್ನು ಭಾರತ ಕ್ರಿಕೆಟ್ ತಂಡದ ನಾಯಕ ಧೋನಿ ಅವರಿಗೆ ಹೋಲಿಸಿದರು. ಸಿಕ್ಸರ್, ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಹಾಗೆಯೇ, ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಕೊಂಡಾಡಿದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದ್ದು, ಎನ್ ಡಿಎ ಮೈತ್ರಿಕೂಟ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಎಲ್ ಕೆ ಅಡ್ವಾಣಿ ಪ್ರಧಾನಿಯಾಗುವುದು ಖಚಿತ ಎಂದರು.
(ದಟ್ಸ್ ಕನ್ನಡ ವಾರ್ತೆ)
ಬಿಜೆಪಿಯಲ್ಲಿ ಎದ್ದಿದ್ದ ಬೆಂಕಿ ಶಮನಗೊಳಿಸಿದೆ ಸಿಎಂ
ಜೈಟ್ಲಿ-ರಾಜನಾಥ್ ವಿರಸ ಅಂತ್ಯಕ್ಕೆ ಅರ್ಎಸ್ಎಸ್












Click it and Unblock the Notifications