ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು
ನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.
ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ ಆರಂಭಿಸಿದ್ದರು. ಕಾರ್ಯಕರ್ತರು ಏರ್ಪಡಿಸಿದ್ದ ಪ್ರಚಾರ ಸಭೆ ಪಾಲ್ಗೊಂಡು ಅಲ್ಪಸಂಖ್ಯಾತರನ್ನು ವಿರೋಧಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ವರುಣ್ ಗಾಂಧಿ ಭಾಷಣಕ್ಕೆ ಪ್ರತಿಪಕ್ಷಗಳು ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳಿಂದ ತೀವ್ರ ಪ್ರತಿರೋಧ ಬಂದಿತ್ತು.
ಕೇಂದ್ರ ಚುನಾವಣೆ ಆಯೋಗ ವರುಣ್ ಗಾಂಧಿ ಮಾಡಿದ ಭಾಷಣದ ಸಿಡಿಯನ್ನು ತರಿಸಿಕೊಂಡು ಕೂಲಂಕಷವಾಗಿ ಪರಿಶೀಲನೆ ನಡೆಸಿದೆ. ಭಾಷಣದಲ್ಲಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಉದ್ರೇಕಕಾರಿ ಭಾಷಣ ಮಾಡಿರುವುದು ಸಾಬೀತಾಗಿದೆ. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವರುಣ್ ಗಾಂಧಿ, ಈ ಪ್ರಕರಣದಲ್ಲಿ ರಾಜಕೀಯ ಕುತಂತ್ರ ಅಡಗಿದೆ. ಅಲ್ಪಸಂಖ್ಯಾತರ ವಿರೋಧಿಸಿ ಪ್ರಚೋದನಕಾರಿ ಭಾಷಣ ಮಾಡಿಲ್ಲ. ಸಿಡಿಯಲ್ಲಿರುವ ಚಿತ್ರೀಕರಣದ ದೃಶ್ಯಾವಳಿಗಳನ್ನು ತಿರುಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ವರುಣ್ ಹೇಳಿಕೆಗೆ ಆಯೋಗ ಕೆಂಗಣ್ಣು, ನೋಟಿಸ್
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications