ಕುಂದಾಪುರದ ಬಳಿ ಮಸೀದಿ ಮೇಲೆ ದಾಳಿ
ಬೈಂದೂರು, ಮಾ. 17 : ಕುಂದಾಪುರ ತಾಲ್ಲೂಕಿನ ಉಪ್ಪುಂದ ಬಳಿಯ ಮಡಿಕಲ್ ಜುಮ್ಮಾ ಮಸೀದಿಯ ಮೇಲೆ ಭಾನುವಾರ ರಾತ್ರಿ ದುಷ್ಕರ್ಮಿಗಳು ದಾಳಿ ಮಾಡಿದ್ದು, ಕೆಲ ಪಿಠೋಪಕರಣಗಳು ಸೇರಿದಂತೆ ಲೈಟ್ ಗಳು, ಫ್ಯಾನ್ ಗಳನ್ನು ಹಾನಿಗೊಳಿಸಲಾಗಿದೆ. ನೆಲಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚುವ ವಿಫಲ ಪ್ರಯತ್ನ ಮಾಡಲಾಗಿದೆ.
ಸೋಮವಾರ ಬೆಳಗ್ಗೆ ದಾಳಿ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಯಾರ ಬಗ್ಗೆಯೂ ಮಸೀದಿಯ ಆಡಳಿತ ಮಂಡಳಿ ಸಂಶಯ ವ್ಯಕ್ತಪಡಿಸಿಲ್ಲ. ಆದರೆ, ಕಾಕತಾಳೀಯವಾಗಿ ಮಂಗಳೂರಿನಲ್ಲಿ ಭಾನುವಾರ ನಡೆದ ಹಿಂದೂ ಸಮಾಜೋತ್ಸವ ಇದರೊಂದಿಗೆ ತಳಕು ಹಾಕಿಕೊಂಡಿದೆ. ಸಮಾಜೋತ್ಸವ ಮುಗಿಸಿ ಮಂಗಳೂರಿನಿಂದ ಉಡುಪಿಗೆ ಕಡೆಗೆ ತೆರಳುತ್ತಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರ ಮೇಲೆ ಉಡುಪು ತಾಲ್ಲೂಕಿನ ಮೂಳೂರು ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ಆ ಬಳಿಕವೇ ಮಡಿಕಲ್ ಬಳಿ ಮಸೀದಿಯ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಇದು ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೃತ್ಯ ಎನ್ನಲಾಗಿದೆ. ಚುನಾವಣೆಯಲ್ಲಿ ಲಾಭ ಪಡೆಯಲು ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಕಾಪು, ವಿಟ್ಲದಲ್ಲಿ ಕಲ್ಲು ತೂರಾಟ, ಉದ್ವಿಗ್ನ
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications