ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು

By Staff
|
Google Oneindia Kannada News

Varun Gandhi
ಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ.

29 ಹರೆಯ ವರುಣ್ ಗಾಂಧಿ ಉತ್ತರದ ಪ್ರದೇಶ ಪಿಲಿಬಿತ್ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಪ್ರಚಾರ ಕಾರ್ಯ ಆರಂಭಿಸಿದ ಅವರು, ಸಭೆಯನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಕಮಲದ ಶಕ್ತಿಯಿಂದ ಭಾರತದಲ್ಲಿರುವ ಮುಸ್ಲಿಮರ ತಲೆಯನ್ನು ತೆಗೆಯಲಾಗುವುದು. ಎಲ್ಲ ಹಿಂದೂಗಳ ಒಂದಾಗಿ ದೇಶದ್ರೋಹಿ ಕೃತ್ಯ ಎಸಗುವವರಿಗೆ ತಕ್ಕ ಪಾಠ ಕಲಿಸೋಣ ಎನ್ನುವ ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X