ಬಿಜೆಪಿ ವರಿಷ್ಠರ ವಿರುದ್ಧ ಮತ್ತೆ ಬಂಡಾಯವೆದ್ದ ಶಿವಪ್ಪ
ಬೆಂಗಳೂರು, ಮಾ. 18 : ಹಾಸನ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನ್ನು ಎಚ್ ಕೆ ಹನುಮೇಗೌಡರಿಗೆ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಮುಖಂಡ ಬಿಬಿ ಶಿವಪ್ಪ, ವರಿಷ್ಠರ ಕ್ರಮಕ್ಕೆ ಅಸಮಾಧಾನಗೊಂಡಿದ್ದಾರೆ. ಹನುಮೇಗೌಡರಿಗೆ ದೇವೇಗೌಡರ ವಿರುದ್ಧ ಗೆಲ್ಲುವ ಶಕ್ತಿ ಖಂಡಿವಾಗಿಯೂ ಇಲ್ಲ. ಅಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿದ್ದು, ಬಿಜೆಪಿ ಗೆಲುವು ಮರಿಚಿಕೆ ಎಂದು ಅವರು ಭವಿಷ್ಯ ನುಡಿದ್ದಾರೆ.
ಹಾಸನ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಪ್ಪ ಅವರಿಗೆ ಟಿಕೆಟ್ ಕೈತಪ್ಪಿರುವುದು ಈ ಅಸಮಾಧಾನಕ್ಕೆ ಕಾರಣವಾಗಿದೆ. ತಾವೂ ಟಿಕೆಟ್ ಆಕಾಂಕ್ಷಿ ಎನ್ನುವುದನ್ನು ಸ್ವತಃ ಅವರೆ ಸ್ಪಷ್ಪಪಡಿಸಿದ್ದಾರೆ. ಹನುಮೇಗೌಡರಿಗೆ ಯಾವ ಮಾನದಂಡದ ಮೇಲೆ ಲೋಕಸಭೆ ಟಿಕೆಟ್ ನೀಡಲಾಗಿದೆ ಎಂದು ಪ್ರಶ್ನಿಸಿದ ಅವರು, ಹನುಮೇಗೌಡ ಪಕ್ಷಾಂತರಿ ಮನಸ್ಥಿತಿಯ ವ್ಯಕ್ತಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೇರೆ ಪಕ್ಷದ ಬಾಗಿಲು ತಟ್ಟಿದ್ದಾರೆ. ಹೋಗಿಯೂ ಬಂದಿದ್ದಾರೆ. ಪಕ್ಷದಲ್ಲಿರುವ ನಿಷ್ಠಾವಂತರನ್ನು ಕಡೆಗಣಿಸಿ ಪಕ್ಷಾಂತರಿಗಳಿಗೆ ಮಣೆ ಹಾಕುವುದು ಸರಿಯಲ್ಲಿ ಎಂದು ಹರಿಹಾಯ್ದರು.
ದೇವೇಗೌಡರನ್ನು ಸೋಲಿಸುವ ತಾಕತ್ತಾಗಲಿ, ಸಾಮರ್ಥ್ಯವಾಗಲಿ ಹನಮೇಗೌಡರಿಗಿಲ್ಲ, ಆದ್ದರಿಂದ ಪಕ್ಷದ ವರಿಷ್ಠರು ಈ ಕೂಡಲೇ ಅಭ್ಯರ್ಥಿಯನ್ನು ಬದಲಾಯಿಸಬೇಕು. ನಾನು ಲಿಂಗಾಯಿತ ದೇವೇಗೌಡರ ವಿರುದ್ಧ ಸೂಕ್ತ ಅಭ್ಯರ್ಥಿ ಅಲ್ಲ ಎನ್ನುವುದಾದರೆ, ಅದೇ ಜನಾಂಗದಲ್ಲಿ ಸಮರ್ಥವಾಗಿರುವ ಬೇರೆ ನಾಯಕನಿಗೆ ಟಿಕೆಟ್ ಕೊಟ್ಟರೂ ಸರಿ. ಆದರೆ, ಹನುಮೇಗೌಡ ಸ್ಪರ್ಧೆ ಎಂದು ಖಡಾಖಂಡಿತವಾಗಿ ಬೇಡ ಹೇಳಿದರು. ಹನುಮೇಗೌಡರು ಅಧಿಕೃತ ಅಭ್ಯರ್ಥಿಯಾದರೆ ನಾವು ಬಿಜೆಪಿ ಮತ ನೀಡುತ್ತೇವೆ. ಆದರೆ, ಮತಯಾಚನೆ ಹೋಗುವುದಿಲ್ಲ ಎಂದು ಶಿವಪ್ಪ ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications