ಬಿಜೆಪಿ ವರಿಷ್ಠರ ವಿರುದ್ಧ ಮತ್ತೆ ಬಂಡಾಯವೆದ್ದ ಶಿವಪ್ಪ
ಬೆಂಗಳೂರು, ಮಾ. 18 : ಹಾಸನ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನ್ನು ಎಚ್ ಕೆ ಹನುಮೇಗೌಡರಿಗೆ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಮುಖಂಡ ಬಿಬಿ ಶಿವಪ್ಪ, ವರಿಷ್ಠರ ಕ್ರಮಕ್ಕೆ ಅಸಮಾಧಾನಗೊಂಡಿದ್ದಾರೆ. ಹನುಮೇಗೌಡರಿಗೆ ದೇವೇಗೌಡರ ವಿರುದ್ಧ ಗೆಲ್ಲುವ ಶಕ್ತಿ ಖಂಡಿವಾಗಿಯೂ ಇಲ್ಲ. ಅಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿದ್ದು, ಬಿಜೆಪಿ ಗೆಲುವು ಮರಿಚಿಕೆ ಎಂದು ಅವರು ಭವಿಷ್ಯ ನುಡಿದ್ದಾರೆ.
ಹಾಸನ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಪ್ಪ ಅವರಿಗೆ ಟಿಕೆಟ್ ಕೈತಪ್ಪಿರುವುದು ಈ ಅಸಮಾಧಾನಕ್ಕೆ ಕಾರಣವಾಗಿದೆ. ತಾವೂ ಟಿಕೆಟ್ ಆಕಾಂಕ್ಷಿ ಎನ್ನುವುದನ್ನು ಸ್ವತಃ ಅವರೆ ಸ್ಪಷ್ಪಪಡಿಸಿದ್ದಾರೆ. ಹನುಮೇಗೌಡರಿಗೆ ಯಾವ ಮಾನದಂಡದ ಮೇಲೆ ಲೋಕಸಭೆ ಟಿಕೆಟ್ ನೀಡಲಾಗಿದೆ ಎಂದು ಪ್ರಶ್ನಿಸಿದ ಅವರು, ಹನುಮೇಗೌಡ ಪಕ್ಷಾಂತರಿ ಮನಸ್ಥಿತಿಯ ವ್ಯಕ್ತಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೇರೆ ಪಕ್ಷದ ಬಾಗಿಲು ತಟ್ಟಿದ್ದಾರೆ. ಹೋಗಿಯೂ ಬಂದಿದ್ದಾರೆ. ಪಕ್ಷದಲ್ಲಿರುವ ನಿಷ್ಠಾವಂತರನ್ನು ಕಡೆಗಣಿಸಿ ಪಕ್ಷಾಂತರಿಗಳಿಗೆ ಮಣೆ ಹಾಕುವುದು ಸರಿಯಲ್ಲಿ ಎಂದು ಹರಿಹಾಯ್ದರು.
ದೇವೇಗೌಡರನ್ನು ಸೋಲಿಸುವ ತಾಕತ್ತಾಗಲಿ, ಸಾಮರ್ಥ್ಯವಾಗಲಿ ಹನಮೇಗೌಡರಿಗಿಲ್ಲ, ಆದ್ದರಿಂದ ಪಕ್ಷದ ವರಿಷ್ಠರು ಈ ಕೂಡಲೇ ಅಭ್ಯರ್ಥಿಯನ್ನು ಬದಲಾಯಿಸಬೇಕು. ನಾನು ಲಿಂಗಾಯಿತ ದೇವೇಗೌಡರ ವಿರುದ್ಧ ಸೂಕ್ತ ಅಭ್ಯರ್ಥಿ ಅಲ್ಲ ಎನ್ನುವುದಾದರೆ, ಅದೇ ಜನಾಂಗದಲ್ಲಿ ಸಮರ್ಥವಾಗಿರುವ ಬೇರೆ ನಾಯಕನಿಗೆ ಟಿಕೆಟ್ ಕೊಟ್ಟರೂ ಸರಿ. ಆದರೆ, ಹನುಮೇಗೌಡ ಸ್ಪರ್ಧೆ ಎಂದು ಖಡಾಖಂಡಿತವಾಗಿ ಬೇಡ ಹೇಳಿದರು. ಹನುಮೇಗೌಡರು ಅಧಿಕೃತ ಅಭ್ಯರ್ಥಿಯಾದರೆ ನಾವು ಬಿಜೆಪಿ ಮತ ನೀಡುತ್ತೇವೆ. ಆದರೆ, ಮತಯಾಚನೆ ಹೋಗುವುದಿಲ್ಲ ಎಂದು ಶಿವಪ್ಪ ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications