ಪುತ್ತೂರು ಬಂದ್ ಬಹುತೇಕ ಯಶಸ್ವಿ
ಪುತ್ತೂರು, ಮಾ. 18 : ಮಂಗಳವಾರ ನಡೆದ ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿರುವ ಭಜರಂಗದಳ ಕಾರ್ಯಕರ್ತರು ಇಂದು ಪುತ್ತೂರು ಬಂದ್ ಕರೆ ನೀಡಿದ್ದಾರೆ. ಸ್ವಯಂ ಪ್ರೇರಿತವಾಗಿ ಎಲ್ಲರೂ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು, ಕಿಡಿಗೇಡಿಗಳು ಗ್ಯಾರೇಜ್ ನಲ್ಲಿದ್ದ ಲಾರಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಬಿಗಿಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಬಂದ್ ಗೆ ಬಹುತೇಕ ಬೆಂಬಲ ವ್ಯಕ್ತವಾಗಿದೆ. ಖಾಸಗಿ ಬಸ್ ನಲ್ಲಿ ಜೊತೆಯಾಗಿ ಸಂಚರಿಸುತ್ತಿದ್ದ ವಿಭಿನ್ನ ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಕೆಲ ನೈತಿಕ ಪೊಲೀಸರು ಎಳೆದು ಹಾಕಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಜಮಾವಣೆಗೊಂಡ ಎರಡು ಕೋಮಿನ ಸಂಘಟನೆಗಳ ನಡುವೆಯೇ ಸಂಘರ್ಷ ಸಂಭವಿಸಿತ್ತು. ಈ ಸಂದರ್ಭದಲ್ಲಿ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರವನ್ನು ನಡೆಸಿದ್ದರು.
(ದಟ್ಸ್
ಕನ್ನಡ
ವಾರ್ತೆ)
ಪುತ್ತೂರಲ್ಲಿ
ಎರಡು
ಕೋಮಿನ
ನಡುವೆ
ಘರ್ಷಣೆ