ವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ

ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು ಕ್ಷಮೆ ಕೇಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ವರುಣ್ ಸತ್ಯವನ್ನೇ ಹೇಳಿದ್ದಾರೆ, ಗಾಂಧಿ ಕುಟುಂಬದ ಒಬ್ಬ ಸದಸ್ಯ ಈ ರೀತಿ ಮಾತನಾಡಬೇಕೆಂದು ನಾನು ಬಯಸಿದ್ದೆ. ವರುಣ್ ಅವರ ನೇರ ಮಾತು ಬಗ್ಗೆ ನನಗೆ ಮೆಚ್ಚುಗೆ ಇದೆ ಎಂದು ವರುಣ್ ಗಾಂಧಿ ಅವರನ್ನು ಪ್ರಶಂಸಿಸಿದ್ದಾರೆ.
ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರುಣ್ ಗಾಂಧಿ ಸಾರ್ವಜನಿಕ ಸಭೆಯೊಂದರಲ್ಲಿ, ಕಮಲದ ಶಕ್ತಿಯಿಂದ ಭಾರತದಲ್ಲಿರುವ ಮುಸ್ಲಿಮರ ತಲೆಯನ್ನು ತೆಗೆಯಲಾಗುವುದು. ಎಲ್ಲ ಹಿಂದೂಗಳ ಒಂದಾಗಿ ದೇಶದ್ರೋಹಿ ಕೃತ್ಯ ಎಸಗುವವರಿಗೆ ತಕ್ಕ ಪಾಠ ಕಲಿಸೋಣ ಎನ್ನುವ ವಿವಾದಕಾರಿ ಹೇಳಿಕೆ ನೀಡಿ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದರು. ಆಯೋಗ ಇವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿತ್ತು.
(ದಟ್ಸ್ ಕನ್ನಡ ವಾರ್ತೆ)
ಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ












Click it and Unblock the Notifications