ಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ

ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ, ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ ಎನ್ನುವ ಸಂಸದ ಸುರೇಶ್ ಅಂಗಡಿಯವರ ಹೇಳಿಕೆ ಅವರ ವೈಯಕ್ತಿಕವಾದದ್ದು. ಅವರ ಬಳಿ ಈ ವಿಚಾರದ ಬಗ್ಗೆ ಮಾತನಾಡಿ ಮುಂದೆ ಇಂತಹ ತಪ್ಪಾಗದಂತೆ ಎಚ್ಚರ ವಹಿಸುತ್ತೇವೆ. ಜಾತಿ ಆಧಾರಿತ ರಾಜಕೀಯ ಮಾಡುವವರು ನಾವಲ್ಲ. ಕನ್ನಡಿಗರ ಭಾವನೆಗೆ, ನಾಡು-ನುಡಿಗೆ ಧಕ್ಕೆ ಆಗುವುದನ್ನು ಸಹಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಇಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಮತ ಪಡೆಯಲು ಬಿಜೆಪಿ ಸರ್ಕಾರ ಗಡಿ ಮಾರಾಟ ಮಾಡಲು ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತೀವ್ರ ಆಕ್ಷೇಪಡಿಸಿದ ಯಡಿಯೂರಪ್ಪ, ನೀತಿ ಸಂಹಿತೆ ಜಾರಿಯಲ್ಲಿರುವುವಾಗ ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಕುಮಾರಸ್ವಾಮಿ ಹೇಳಿಕೆಯನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿಕೊಂಡರು.
ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ್ ಪಾಟೀಲ್ ಅವರನ್ನು ಬಿಜೆಪಿಯಿ೦ದ ಉಚ್ಚಾಟಿಸಬೇಕು. ಇಲ್ಲದಿದ್ದರೆ ನಾಳೆಯಿಂದಲೇ ಅವರ ವಿರುದ್ಧ ಮತ್ತು ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಜನಾಂದೋಲನ ಆರಂಭಿಸಲಾಗುವುದು ಎಂದು ಅವರು ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿತ್ತು. ಸೋಮವಾರ ಕರವೇ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಲು ಮುಂದಾದಾಗ ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಅದನ್ನು ವಿರೋಧಿಸಿ ಎಂಇಎಸ್ ಬೆಂಬಲಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ












Click it and Unblock the Notifications