ಪ್ರಾಣಿ ಬಲಿ ಪೂರ್ಣ ನಿಷೇಧ: ಡಿಸಿ ಮಣಿವಣ್ಣನ್
ಮೈಸೂರು, ಮಾ. 19 : ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1956 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು 1967ರ ರೀತಿ ಪ್ರಾಣಿ ಬಲಿಯನ್ನು ಸರ್ಕಾರವು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲ ಕಾಲಗಳಲ್ಲಿ ಹಾಗೂ ಎಲ್ಲ ಸಂದರ್ಭಗಳಲ್ಲಿ ಪ್ರಾಣಿ ಬಲಿ ನೀಡುವುದು ಮೇಲ್ಕಂಡ ಕಾಯ್ಕೆಯ ಉಲ್ಲಂಘನೆಯಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿ ಪಿ. ಮಣಿವಣ್ಣನ್ ತಿಳಿಸಿದ್ದಾರೆ.
ಮೇಲ್ಕಂಡ ಕಾಯಿದೆಗಳನ್ನು ಉಲ್ಲಂಘಿಸಿ ಪ್ರಾಣಿಬಲಿ ನೀಡಿದರೆ ಆರು ತಿಂಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸ (ಜೈಲು) ಶಿಕ್ಷೆ ಹಾಗೂ ದಂಡ ಅಥವಾ ಇವೆರಡನ್ನೂ ನ್ಯಾಯಾಲಯವು ಶಿಕ್ಷೆಯಾಗಿ ನೀಡಬಹುದಾಗಿದೆ. ಆದ್ದರಿಂದ ಯಾವುದೇ ಸಾರ್ವಜನಿಕರು ಪ್ರಾಣಿಬಲಿನೀಡಿದಲ್ಲಿ ಅಂತಹವರ ವಿರುದ್ಧ ಮೇಲ್ಕಂಡ ಕಾಯಿದೆಯಡಿ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಕೆ.ಆರ್.ನಗರ ತಾಲ್ಲೂಕು ಕಪ್ಪಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ಸಹ ಪ್ರಾಣಿಬಲಿ ಕೊಡುವುದು ಹಾಗೂ ಪ್ರಾಣಿಬಲಿಗೆ ಉತ್ತೇಜನ ನೀಡುವುದನ್ನು ಎಲ್ಲ ಕಾಲಕ್ಕೂ ನಿಷೇಧಿಸಿ ಆದೇಶ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಜಾತ್ರೆ ಸಮಯದಲ್ಲಿ ಪ್ರಾಣಿಬಲಿ ನೀಡುವ ಉದ್ದೇಶಕ್ಕಾಗಿ ಪ್ರಾಣಿಗಳನ್ನು ಮತ್ತು ಮಾರಕ ಆಯುಧಗಳನ್ನು ತೆಗೆದುಕೊಂಡು ಹೋಗುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪಶುಪಾಲನಾ ಇಲಾಖೆಯೂ ಸಹ ಈ ಕುರಿತು ಹಲವು ಬಾರಿ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದೆ. ಇಂತಹ ಪ್ರಾಣಿಬಲಿ ಕೊಡುವುದು ಸರ್ವೆ ಸಾಮಾನ್ಯವಾಗಿ ಜರುಗುತ್ತಲೇ ಬಂದಿರುತ್ತದೆ. ಆದ್ದರಿಂದ ಪ್ರಾಣಿಬಲಿ ಆಚರಣೆಯನ್ನು ಕೈಬಿಡುವುದರ ಮೂಲಕ ಈ ಹಾದಿಯಲ್ಲಿ ಇಲಾಖೆಯು ನಡೆಸುತ್ತಿರುವ ಪ್ರಯತ್ನಗಳಿಗೆ ಸಂಪೂರ್ಣವಾಗಿ ಸಹಕರಿಸುವಂತೆ ಕೋರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications