ಪ್ರಾಣಿ ಬಲಿ ಪೂರ್ಣ ನಿಷೇಧ: ಡಿಸಿ ಮಣಿವಣ್ಣನ್
ಮೈಸೂರು, ಮಾ. 19 : ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1956 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು 1967ರ ರೀತಿ ಪ್ರಾಣಿ ಬಲಿಯನ್ನು ಸರ್ಕಾರವು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲ ಕಾಲಗಳಲ್ಲಿ ಹಾಗೂ ಎಲ್ಲ ಸಂದರ್ಭಗಳಲ್ಲಿ ಪ್ರಾಣಿ ಬಲಿ ನೀಡುವುದು ಮೇಲ್ಕಂಡ ಕಾಯ್ಕೆಯ ಉಲ್ಲಂಘನೆಯಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿ ಪಿ. ಮಣಿವಣ್ಣನ್ ತಿಳಿಸಿದ್ದಾರೆ.
ಮೇಲ್ಕಂಡ ಕಾಯಿದೆಗಳನ್ನು ಉಲ್ಲಂಘಿಸಿ ಪ್ರಾಣಿಬಲಿ ನೀಡಿದರೆ ಆರು ತಿಂಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸ (ಜೈಲು) ಶಿಕ್ಷೆ ಹಾಗೂ ದಂಡ ಅಥವಾ ಇವೆರಡನ್ನೂ ನ್ಯಾಯಾಲಯವು ಶಿಕ್ಷೆಯಾಗಿ ನೀಡಬಹುದಾಗಿದೆ. ಆದ್ದರಿಂದ ಯಾವುದೇ ಸಾರ್ವಜನಿಕರು ಪ್ರಾಣಿಬಲಿನೀಡಿದಲ್ಲಿ ಅಂತಹವರ ವಿರುದ್ಧ ಮೇಲ್ಕಂಡ ಕಾಯಿದೆಯಡಿ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಕೆ.ಆರ್.ನಗರ ತಾಲ್ಲೂಕು ಕಪ್ಪಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ಸಹ ಪ್ರಾಣಿಬಲಿ ಕೊಡುವುದು ಹಾಗೂ ಪ್ರಾಣಿಬಲಿಗೆ ಉತ್ತೇಜನ ನೀಡುವುದನ್ನು ಎಲ್ಲ ಕಾಲಕ್ಕೂ ನಿಷೇಧಿಸಿ ಆದೇಶ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಜಾತ್ರೆ ಸಮಯದಲ್ಲಿ ಪ್ರಾಣಿಬಲಿ ನೀಡುವ ಉದ್ದೇಶಕ್ಕಾಗಿ ಪ್ರಾಣಿಗಳನ್ನು ಮತ್ತು ಮಾರಕ ಆಯುಧಗಳನ್ನು ತೆಗೆದುಕೊಂಡು ಹೋಗುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪಶುಪಾಲನಾ ಇಲಾಖೆಯೂ ಸಹ ಈ ಕುರಿತು ಹಲವು ಬಾರಿ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದೆ. ಇಂತಹ ಪ್ರಾಣಿಬಲಿ ಕೊಡುವುದು ಸರ್ವೆ ಸಾಮಾನ್ಯವಾಗಿ ಜರುಗುತ್ತಲೇ ಬಂದಿರುತ್ತದೆ. ಆದ್ದರಿಂದ ಪ್ರಾಣಿಬಲಿ ಆಚರಣೆಯನ್ನು ಕೈಬಿಡುವುದರ ಮೂಲಕ ಈ ಹಾದಿಯಲ್ಲಿ ಇಲಾಖೆಯು ನಡೆಸುತ್ತಿರುವ ಪ್ರಯತ್ನಗಳಿಗೆ ಸಂಪೂರ್ಣವಾಗಿ ಸಹಕರಿಸುವಂತೆ ಕೋರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications